ಬ್ರೇಕಿಂಗ್ ನ್ಯೂಸ್
20-09-21 10:55 am Headline Karnataka News Network ದೇಶ - ವಿದೇಶ
ರಾಜನಂದಗಾಂವ್, ಸೆ.20: ಛತ್ತೀಸ್ಗಢದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ರಾಜೀಂದರ್ ಪಾಲ್ ಸಿಂಗ್ ಭಾಟಿಯಾ ಅವರ ಮೃತದೇಹ ಅವರ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ರವಿವಾರ ರಾತ್ರಿ ಚುರಿಯಾ ಪಟ್ಟಣದ ನಿವಾಸದಲ್ಲಿ ಭಾಟಿಯಾ (72) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿಷಯ ತಿಳಿದ ತಕ್ಷಣ ಧಾವಿಸಿದ ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಟಿಪ್ಪಣಿ ಲಭ್ಯವಾಗಿದೆಯೇ ಎನ್ನುವುದನ್ನು ಪೊಲೀಸರು ಇದುವರೆಗೆ ದೃಢಪಡಿಸಿಲ್ಲ.


ಬಿಜೆಪಿ ಮುಖಂಡರ ಪ್ರಕಾರ, ಭಾಟಿಯಾ ಅವರಿಗೆ ಕಳೆದ ಮಾರ್ಚ್ನಲ್ಲಿ ಕೋವಿಡ್-19 ಸೋಂಕು ತಗುಲಿತ್ತು. ಇದರಿಂದ ಚೇತರಿಸಿಕೊಂಡ ಬಳಿಕವೂ ಅಸ್ವಸ್ಥತೆ ಕಾಡುತ್ತಿತ್ತು.
ಜಿಲ್ಲೆಯ ಖುಜ್ಜಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಭಾಟಿಯಾ, ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2013ರಲ್ಲಿ ಇವರಿಗೆ ಪಕ್ಷ ಟಿಕೆಟ್ ನಿರಾಕರಿಸಿದ ಸಂದರ್ಭದಲ್ಲಿ ಇವರು ಬಂಡಾಯದ ಬಾವುಟ ಹಾರಿಸಿದ್ದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.
ಆದರೆ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಇವರ ಪತ್ನಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದು, ಏಕೈಕ ಪುತ್ರ ಜಗಜೀತ್ ಸಿಂಗ್ ಭಾಟಿಯಾ ರಾಯಪುರದ ಖಾಸಗಿ ಆಸ್ಪತ್ರೆಯೊಂದರ ಆಡಳಿತ ಮಂಡಳಿಯಲ್ಲಿದ್ದಾರೆ.
Former Chhattisgarh minister and senior BJP leader Rajinder Pal Singh Bhatia was found hanging at his residence in Rajnandgaon district of the state on Sunday, in what police suspect is a case of suicide.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm