ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.
“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm