ಬ್ರೇಕಿಂಗ್ ನ್ಯೂಸ್
21-09-21 03:21 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆ.21: ಕಳೆದ ಜೂನ್ ತಿಂಗಳಲ್ಲಿ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದ 38 ಮಂದಿ ಲಂಕನ್ನರ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ತಮಿಳುನಾಡಿನ ರಾಮೇಶ್ವರ ಜಿಲ್ಲೆಯಲ್ಲಿ ಹಲವರನ್ನು ವಿಚಾರಣೆ ನಡೆಸಿದ್ದಾರೆ.
ಶ್ರೀಲಂಕಾದಿಂದ ಮೀನುಗಾರರ ಸೋಗಿನಲ್ಲಿ ಬರುವ ಮಂದಿಯನ್ನು ರಾಮೇಶ್ವರದಲ್ಲಿ ಕೆಲವರು ಉಳಿಯಲು ವ್ಯವಸ್ಥೆ ಮಾಡುತ್ತಾರೆ. ಅಲ್ಲದೆ, ಅಕ್ರಮವಾಗಿ ಭಾರತಕ್ಕೆ ನುಸುಳಲು ಸಹಾಯ ಮಾಡಿದ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತಮಿಳುನಾಡು ಕರಾವಳಿಯ ಶಂಕಿತರ ವಿಚಾರಣೆಗೆ ಮುಂದಾಗಿದ್ದಾರೆ.



ಈಗಾಗ್ಲೇ ಮಂಗಳೂರಿನಲ್ಲಿ ಬಂಧಿಸಲ್ಪಟ್ಟ 38 ಮಂದಿಯನ್ನು ಬೆಂಗಳೂರಿಗೆ ಕರೆದೊಯ್ದಿರುವ ಅಧಿಕಾರಿಗಳು ಅವರ ಮಾಹಿತಿ ಆಧರಿಸಿ, ತಮಿಳುನಾಡಿಗೆ ತೆರಳಿದ್ದಾರೆ. ರಾಮೇಶ್ವರ ಜಿಲ್ಲೆಯ ಮರೈಕಾಯರ್ ಪಟ್ನಂ, ವೇದಲೈ, ಸೀನಿಯಪಾದರಾ ಎನ್ನುವ ಕರಾವಳಿ ತೀರ ಪ್ರದೇಶಗಳಲ್ಲಿ ಲಂಕನ್ನರಿಗೆ ವಸತಿ ಒದಗಿಸಲಾಗಿತ್ತು. ಇದರ ಬಗ್ಗೆ ಅಲ್ಲಿನ ನಿವಾಸಿಗಳಿಂದ ಎನ್ಐಎ ಮಾಹಿತಿ ಕಲೆಹಾಕಿದ್ದಾರೆ. ಲಂಕಾದಿಂದ ಡ್ರಗ್ ಕಳ್ಳಸಾಗಣಿಕೆ ಆಗುತ್ತಿರುವ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ.
ಲಂಕಾದ ನಿವಾಸಿಗಳು ತಲಾ 6ರಿಂದ 10 ಲಕ್ಷ ಶ್ರೀಲಂಕಾ ರೂಪಾಯಿ ಏಜಂಟರಿಗೆ ಕೊಟ್ಟು ತಮಿಳುನಾಡಿಗೆ ಬಂದಿದ್ದು, ಅಲ್ಲಿಂದ ಬೆಂಗಳೂರು ಬಳಿಕ ಮಂಗಳೂರಿಗೆ ಬಂದಿದ್ದರು. ಮಂಗಳೂರಿನಿಂದ ಕೆನಡಾಕ್ಕೆ ಒಯ್ಯುವ ಪ್ಲಾನ್ ಹಾಕಿದ್ದರು. ಮಾ.17ರಂದು ಲಂಕಾದಲ್ಲಿ ಹೊರಟಿದ್ದ ನಿವಾಸಿಗಳು ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ವೇಳೆ ಸಿಕ್ಕಿಬಿದ್ದಿದ್ದರು. ಪೊಲೀಸರು ವಿಚಾರಣೆ ನಡೆಸಿದಾಗ ಕೆನಡಾಕ್ಕೆ ಮಾನವ ಕಳ್ಳಸಾಗಾಣಿಕೆ ಮಾಡಲಾಗುತ್ತಿದೆ ಎನ್ನುವ ವಿಚಾರ ತಿಳಿದುಬಂದಿತ್ತು. ಆನಂತರ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ತನಿಖಾ ದಳ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.
The National Investigation Agency (NIA) on Sunday held enquiries in the coastal villages of Rameswaram in the district in connection with a case related to the detention of 38 Sri Lankan nationals in June for alleged their illegal stay in the country.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm