ಬ್ರೇಕಿಂಗ್ ನ್ಯೂಸ್
22-09-21 03:02 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಸೆ.21: ಕೆಲವೊಮ್ಮೆ ಅದೃಷ್ಟ ಲಕ್ಷ್ಮಿ ಒಲಿದರೆ ಬಡವನೂ ಕೋಟ್ಯಧಿಪತಿ ಆಗುತ್ತಾನೆ. ಹೌದು, ಈ ಬಾರಿ ಕೇರಳದ ಓಣಂ ಹಬ್ಬದ ಬಂಪರ್ ಲಾಟರಿ ಬಡ ಆಟೋ ಚಾಲಕನಿಗೆ ಒಲಿದಿದೆ. 12 ಕೋಟಿ ರೂ. ತಿರುವೋಣಂ ಬಂಪರ್ ಲಾಟರಿಯನ್ನು ಎರ್ನಾಕುಲಂ ಜಿಲ್ಲೆಯ ಆಟೋ ಚಾಲಕ ಜಯಪಾಲನ್ ಎಂಬಾತ ಗೆದ್ದಿದ್ದಾನೆ.
ಆಟೋರಿಕ್ಷಾ ಓಡಿಸುತ್ತಾ ಸಂಕಷ್ಟದಲ್ಲಿ ಜೀವನ ಸಾಗಿಸ್ತಿದ್ದ ಜಯಪಾಲನ್ಗೆ ದಿಢೀರ್ ಅದೃಷ್ಟ ಒಲಿದು ಬಂದಿದೆ. ಸಾಕಷ್ಟು ಜನರಿಗೆ ಲಕ್ ತಂದಿರುವ ಮೀನಾಕ್ಷಿ ಲಕ್ಕಿ ಸೆಂಟರ್ನಲ್ಲಿ ಜಯಪಾಲನ್ ಲಾಟರಿ ಖರೀದಿ ಮಾಡಿದ್ದರು. 12 ಕೋಟಿ ರೂ. ಮೊತ್ತದ ಲಾಟರಿಯಲ್ಲಿ ತೆರಿಗೆ ಎಲ್ಲಾ ಕಳೆದು ಸುಮಾರು 7.4 ಕೋಟಿ ರೂಪಾಯಿ ಜಯಪಾಲನ್ಗೆ ಸಿಗಲಿದೆ.
ಲಾಟರಿ ಟಿಕೆಟ್ ಪಡೆದಿದ್ದ ಜಯಪಾಲನ್ಗೆ ತನ್ನ ಟಿಕೆಟ್ ಫ್ಯಾನ್ಸಿ ನಂಬರ್ ಅನ್ನೋದು ತಿಳಿದಿರಲಿಲ್ಲ. ಟಿಕೆಟ್ ಸಂಖ್ಯೆ TE 645465 ಲಾಟರಿ ಗೆದ್ದಿದೆ ಎಂದು ಘೋಷಿಸಲಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಜಯಪಾಲನ್ ಕುಣಿದು ಕುಪ್ಪಳಿಸಿದ್ದಾರೆ. 300 ರೂ. ಬೆಲೆಯ ಲಾಟರಿ ಟಿಕೆಟ್ ಖರೀದಿಸಿ, 7 ಕೋಟಿ ಬಾಚಿದ್ದನ್ನು ಜಯಪಾಲನ್ ಗೆ ನಂಬಲು ಸಾಧ್ಯವಾಗುತ್ತಿಲ್ಲ. ಈ ಹಣವನ್ನು ಏನು ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಕೆಲವೊಂದು ಸಾಲ ಇದೆ, ಅದನ್ನು ತೀರಿಸ್ತೀನಿ. ಆನಂತರ ಮಕ್ಕಳ ಶಿಕ್ಷಣಕ್ಕೆ ವ್ಯಯ ಮಾಡ್ತೀನಿ ಎಂದು ಹೇಳಿದ್ದಾರೆ.





ದೇವಸ್ಥಾನದ ಗುಮಾಸ್ತ ಗೆದ್ದಿದ್ದ ಲಾಟರಿ !
2020ರಲ್ಲಿ ತಿರುವೋಣಂ ಲಾಟರಿಯನ್ನು ದೇವಸ್ಥಾನದ ಗುಮಾಸ್ತ ಗೆದ್ದಿದ್ದರು. ಇಡುಕ್ಕಿ ಮೂಲದ ಅನಂತು ವಿಜಯನ್ ಬರೋಬ್ಬರಿ 12 ಕೋಟಿ ಗೆದಿದ್ದರು. ತೆರಿಗೆ ಎಲ್ಲಾ ಕಡಿತಗೊಂಡು 7.56 ಕೋಟಿ ರು. ಅಂತೂ ವಿಜಯನ್ ಕೈಸೇರಿತ್ತು. ಕೇರಳದ ಇಡುಕ್ಕಿಯಲ್ಲಿ ಬಡತನದಲ್ಲೇ ನರಳುತ್ತಿದ್ದ ಅನಂತು ಕುಟುಂಬಕ್ಕೆ ಮನೆ ರಿಪೇರಿ ಮಾಡಿಸಲು ಕೂಡ ಹಣವಿರಲಿಲ್ಲ. ಆದರೆ, ಲಾಟರಿ ಮೂಲಕ ಭಾಗ್ಯದ ಬಾಗಿಲು ತೆರೆದಿತ್ತು.
The lucky winner of the Thiruvonam bumper lottery has finally been identified Jayapalan, an auto driver from Maradu, Thrippunithura, has won the first prize of Rs 12 crore Jayapalan bought the ticket on the 10th of this month.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am