ಬ್ರೇಕಿಂಗ್ ನ್ಯೂಸ್
22-09-21 03:02 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಸೆ.21: ಕೆಲವೊಮ್ಮೆ ಅದೃಷ್ಟ ಲಕ್ಷ್ಮಿ ಒಲಿದರೆ ಬಡವನೂ ಕೋಟ್ಯಧಿಪತಿ ಆಗುತ್ತಾನೆ. ಹೌದು, ಈ ಬಾರಿ ಕೇರಳದ ಓಣಂ ಹಬ್ಬದ ಬಂಪರ್ ಲಾಟರಿ ಬಡ ಆಟೋ ಚಾಲಕನಿಗೆ ಒಲಿದಿದೆ. 12 ಕೋಟಿ ರೂ. ತಿರುವೋಣಂ ಬಂಪರ್ ಲಾಟರಿಯನ್ನು ಎರ್ನಾಕುಲಂ ಜಿಲ್ಲೆಯ ಆಟೋ ಚಾಲಕ ಜಯಪಾಲನ್ ಎಂಬಾತ ಗೆದ್ದಿದ್ದಾನೆ.
ಆಟೋರಿಕ್ಷಾ ಓಡಿಸುತ್ತಾ ಸಂಕಷ್ಟದಲ್ಲಿ ಜೀವನ ಸಾಗಿಸ್ತಿದ್ದ ಜಯಪಾಲನ್ಗೆ ದಿಢೀರ್ ಅದೃಷ್ಟ ಒಲಿದು ಬಂದಿದೆ. ಸಾಕಷ್ಟು ಜನರಿಗೆ ಲಕ್ ತಂದಿರುವ ಮೀನಾಕ್ಷಿ ಲಕ್ಕಿ ಸೆಂಟರ್ನಲ್ಲಿ ಜಯಪಾಲನ್ ಲಾಟರಿ ಖರೀದಿ ಮಾಡಿದ್ದರು. 12 ಕೋಟಿ ರೂ. ಮೊತ್ತದ ಲಾಟರಿಯಲ್ಲಿ ತೆರಿಗೆ ಎಲ್ಲಾ ಕಳೆದು ಸುಮಾರು 7.4 ಕೋಟಿ ರೂಪಾಯಿ ಜಯಪಾಲನ್ಗೆ ಸಿಗಲಿದೆ.
ಲಾಟರಿ ಟಿಕೆಟ್ ಪಡೆದಿದ್ದ ಜಯಪಾಲನ್ಗೆ ತನ್ನ ಟಿಕೆಟ್ ಫ್ಯಾನ್ಸಿ ನಂಬರ್ ಅನ್ನೋದು ತಿಳಿದಿರಲಿಲ್ಲ. ಟಿಕೆಟ್ ಸಂಖ್ಯೆ TE 645465 ಲಾಟರಿ ಗೆದ್ದಿದೆ ಎಂದು ಘೋಷಿಸಲಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಜಯಪಾಲನ್ ಕುಣಿದು ಕುಪ್ಪಳಿಸಿದ್ದಾರೆ. 300 ರೂ. ಬೆಲೆಯ ಲಾಟರಿ ಟಿಕೆಟ್ ಖರೀದಿಸಿ, 7 ಕೋಟಿ ಬಾಚಿದ್ದನ್ನು ಜಯಪಾಲನ್ ಗೆ ನಂಬಲು ಸಾಧ್ಯವಾಗುತ್ತಿಲ್ಲ. ಈ ಹಣವನ್ನು ಏನು ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಕೆಲವೊಂದು ಸಾಲ ಇದೆ, ಅದನ್ನು ತೀರಿಸ್ತೀನಿ. ಆನಂತರ ಮಕ್ಕಳ ಶಿಕ್ಷಣಕ್ಕೆ ವ್ಯಯ ಮಾಡ್ತೀನಿ ಎಂದು ಹೇಳಿದ್ದಾರೆ.





ದೇವಸ್ಥಾನದ ಗುಮಾಸ್ತ ಗೆದ್ದಿದ್ದ ಲಾಟರಿ !
2020ರಲ್ಲಿ ತಿರುವೋಣಂ ಲಾಟರಿಯನ್ನು ದೇವಸ್ಥಾನದ ಗುಮಾಸ್ತ ಗೆದ್ದಿದ್ದರು. ಇಡುಕ್ಕಿ ಮೂಲದ ಅನಂತು ವಿಜಯನ್ ಬರೋಬ್ಬರಿ 12 ಕೋಟಿ ಗೆದಿದ್ದರು. ತೆರಿಗೆ ಎಲ್ಲಾ ಕಡಿತಗೊಂಡು 7.56 ಕೋಟಿ ರು. ಅಂತೂ ವಿಜಯನ್ ಕೈಸೇರಿತ್ತು. ಕೇರಳದ ಇಡುಕ್ಕಿಯಲ್ಲಿ ಬಡತನದಲ್ಲೇ ನರಳುತ್ತಿದ್ದ ಅನಂತು ಕುಟುಂಬಕ್ಕೆ ಮನೆ ರಿಪೇರಿ ಮಾಡಿಸಲು ಕೂಡ ಹಣವಿರಲಿಲ್ಲ. ಆದರೆ, ಲಾಟರಿ ಮೂಲಕ ಭಾಗ್ಯದ ಬಾಗಿಲು ತೆರೆದಿತ್ತು.
The lucky winner of the Thiruvonam bumper lottery has finally been identified Jayapalan, an auto driver from Maradu, Thrippunithura, has won the first prize of Rs 12 crore Jayapalan bought the ticket on the 10th of this month.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm