ಬ್ರೇಕಿಂಗ್ ನ್ಯೂಸ್
22-09-21 03:02 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಸೆ.21: ಕೆಲವೊಮ್ಮೆ ಅದೃಷ್ಟ ಲಕ್ಷ್ಮಿ ಒಲಿದರೆ ಬಡವನೂ ಕೋಟ್ಯಧಿಪತಿ ಆಗುತ್ತಾನೆ. ಹೌದು, ಈ ಬಾರಿ ಕೇರಳದ ಓಣಂ ಹಬ್ಬದ ಬಂಪರ್ ಲಾಟರಿ ಬಡ ಆಟೋ ಚಾಲಕನಿಗೆ ಒಲಿದಿದೆ. 12 ಕೋಟಿ ರೂ. ತಿರುವೋಣಂ ಬಂಪರ್ ಲಾಟರಿಯನ್ನು ಎರ್ನಾಕುಲಂ ಜಿಲ್ಲೆಯ ಆಟೋ ಚಾಲಕ ಜಯಪಾಲನ್ ಎಂಬಾತ ಗೆದ್ದಿದ್ದಾನೆ.
ಆಟೋರಿಕ್ಷಾ ಓಡಿಸುತ್ತಾ ಸಂಕಷ್ಟದಲ್ಲಿ ಜೀವನ ಸಾಗಿಸ್ತಿದ್ದ ಜಯಪಾಲನ್ಗೆ ದಿಢೀರ್ ಅದೃಷ್ಟ ಒಲಿದು ಬಂದಿದೆ. ಸಾಕಷ್ಟು ಜನರಿಗೆ ಲಕ್ ತಂದಿರುವ ಮೀನಾಕ್ಷಿ ಲಕ್ಕಿ ಸೆಂಟರ್ನಲ್ಲಿ ಜಯಪಾಲನ್ ಲಾಟರಿ ಖರೀದಿ ಮಾಡಿದ್ದರು. 12 ಕೋಟಿ ರೂ. ಮೊತ್ತದ ಲಾಟರಿಯಲ್ಲಿ ತೆರಿಗೆ ಎಲ್ಲಾ ಕಳೆದು ಸುಮಾರು 7.4 ಕೋಟಿ ರೂಪಾಯಿ ಜಯಪಾಲನ್ಗೆ ಸಿಗಲಿದೆ.
ಲಾಟರಿ ಟಿಕೆಟ್ ಪಡೆದಿದ್ದ ಜಯಪಾಲನ್ಗೆ ತನ್ನ ಟಿಕೆಟ್ ಫ್ಯಾನ್ಸಿ ನಂಬರ್ ಅನ್ನೋದು ತಿಳಿದಿರಲಿಲ್ಲ. ಟಿಕೆಟ್ ಸಂಖ್ಯೆ TE 645465 ಲಾಟರಿ ಗೆದ್ದಿದೆ ಎಂದು ಘೋಷಿಸಲಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಜಯಪಾಲನ್ ಕುಣಿದು ಕುಪ್ಪಳಿಸಿದ್ದಾರೆ. 300 ರೂ. ಬೆಲೆಯ ಲಾಟರಿ ಟಿಕೆಟ್ ಖರೀದಿಸಿ, 7 ಕೋಟಿ ಬಾಚಿದ್ದನ್ನು ಜಯಪಾಲನ್ ಗೆ ನಂಬಲು ಸಾಧ್ಯವಾಗುತ್ತಿಲ್ಲ. ಈ ಹಣವನ್ನು ಏನು ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಕೆಲವೊಂದು ಸಾಲ ಇದೆ, ಅದನ್ನು ತೀರಿಸ್ತೀನಿ. ಆನಂತರ ಮಕ್ಕಳ ಶಿಕ್ಷಣಕ್ಕೆ ವ್ಯಯ ಮಾಡ್ತೀನಿ ಎಂದು ಹೇಳಿದ್ದಾರೆ.
ದೇವಸ್ಥಾನದ ಗುಮಾಸ್ತ ಗೆದ್ದಿದ್ದ ಲಾಟರಿ !
2020ರಲ್ಲಿ ತಿರುವೋಣಂ ಲಾಟರಿಯನ್ನು ದೇವಸ್ಥಾನದ ಗುಮಾಸ್ತ ಗೆದ್ದಿದ್ದರು. ಇಡುಕ್ಕಿ ಮೂಲದ ಅನಂತು ವಿಜಯನ್ ಬರೋಬ್ಬರಿ 12 ಕೋಟಿ ಗೆದಿದ್ದರು. ತೆರಿಗೆ ಎಲ್ಲಾ ಕಡಿತಗೊಂಡು 7.56 ಕೋಟಿ ರು. ಅಂತೂ ವಿಜಯನ್ ಕೈಸೇರಿತ್ತು. ಕೇರಳದ ಇಡುಕ್ಕಿಯಲ್ಲಿ ಬಡತನದಲ್ಲೇ ನರಳುತ್ತಿದ್ದ ಅನಂತು ಕುಟುಂಬಕ್ಕೆ ಮನೆ ರಿಪೇರಿ ಮಾಡಿಸಲು ಕೂಡ ಹಣವಿರಲಿಲ್ಲ. ಆದರೆ, ಲಾಟರಿ ಮೂಲಕ ಭಾಗ್ಯದ ಬಾಗಿಲು ತೆರೆದಿತ್ತು.
The lucky winner of the Thiruvonam bumper lottery has finally been identified Jayapalan, an auto driver from Maradu, Thrippunithura, has won the first prize of Rs 12 crore Jayapalan bought the ticket on the 10th of this month.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am