ಬ್ರೇಕಿಂಗ್ ನ್ಯೂಸ್
22-09-21 03:02 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಸೆ.21: ಕೆಲವೊಮ್ಮೆ ಅದೃಷ್ಟ ಲಕ್ಷ್ಮಿ ಒಲಿದರೆ ಬಡವನೂ ಕೋಟ್ಯಧಿಪತಿ ಆಗುತ್ತಾನೆ. ಹೌದು, ಈ ಬಾರಿ ಕೇರಳದ ಓಣಂ ಹಬ್ಬದ ಬಂಪರ್ ಲಾಟರಿ ಬಡ ಆಟೋ ಚಾಲಕನಿಗೆ ಒಲಿದಿದೆ. 12 ಕೋಟಿ ರೂ. ತಿರುವೋಣಂ ಬಂಪರ್ ಲಾಟರಿಯನ್ನು ಎರ್ನಾಕುಲಂ ಜಿಲ್ಲೆಯ ಆಟೋ ಚಾಲಕ ಜಯಪಾಲನ್ ಎಂಬಾತ ಗೆದ್ದಿದ್ದಾನೆ.
ಆಟೋರಿಕ್ಷಾ ಓಡಿಸುತ್ತಾ ಸಂಕಷ್ಟದಲ್ಲಿ ಜೀವನ ಸಾಗಿಸ್ತಿದ್ದ ಜಯಪಾಲನ್ಗೆ ದಿಢೀರ್ ಅದೃಷ್ಟ ಒಲಿದು ಬಂದಿದೆ. ಸಾಕಷ್ಟು ಜನರಿಗೆ ಲಕ್ ತಂದಿರುವ ಮೀನಾಕ್ಷಿ ಲಕ್ಕಿ ಸೆಂಟರ್ನಲ್ಲಿ ಜಯಪಾಲನ್ ಲಾಟರಿ ಖರೀದಿ ಮಾಡಿದ್ದರು. 12 ಕೋಟಿ ರೂ. ಮೊತ್ತದ ಲಾಟರಿಯಲ್ಲಿ ತೆರಿಗೆ ಎಲ್ಲಾ ಕಳೆದು ಸುಮಾರು 7.4 ಕೋಟಿ ರೂಪಾಯಿ ಜಯಪಾಲನ್ಗೆ ಸಿಗಲಿದೆ.
ಲಾಟರಿ ಟಿಕೆಟ್ ಪಡೆದಿದ್ದ ಜಯಪಾಲನ್ಗೆ ತನ್ನ ಟಿಕೆಟ್ ಫ್ಯಾನ್ಸಿ ನಂಬರ್ ಅನ್ನೋದು ತಿಳಿದಿರಲಿಲ್ಲ. ಟಿಕೆಟ್ ಸಂಖ್ಯೆ TE 645465 ಲಾಟರಿ ಗೆದ್ದಿದೆ ಎಂದು ಘೋಷಿಸಲಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಜಯಪಾಲನ್ ಕುಣಿದು ಕುಪ್ಪಳಿಸಿದ್ದಾರೆ. 300 ರೂ. ಬೆಲೆಯ ಲಾಟರಿ ಟಿಕೆಟ್ ಖರೀದಿಸಿ, 7 ಕೋಟಿ ಬಾಚಿದ್ದನ್ನು ಜಯಪಾಲನ್ ಗೆ ನಂಬಲು ಸಾಧ್ಯವಾಗುತ್ತಿಲ್ಲ. ಈ ಹಣವನ್ನು ಏನು ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಕೆಲವೊಂದು ಸಾಲ ಇದೆ, ಅದನ್ನು ತೀರಿಸ್ತೀನಿ. ಆನಂತರ ಮಕ್ಕಳ ಶಿಕ್ಷಣಕ್ಕೆ ವ್ಯಯ ಮಾಡ್ತೀನಿ ಎಂದು ಹೇಳಿದ್ದಾರೆ.





ದೇವಸ್ಥಾನದ ಗುಮಾಸ್ತ ಗೆದ್ದಿದ್ದ ಲಾಟರಿ !
2020ರಲ್ಲಿ ತಿರುವೋಣಂ ಲಾಟರಿಯನ್ನು ದೇವಸ್ಥಾನದ ಗುಮಾಸ್ತ ಗೆದ್ದಿದ್ದರು. ಇಡುಕ್ಕಿ ಮೂಲದ ಅನಂತು ವಿಜಯನ್ ಬರೋಬ್ಬರಿ 12 ಕೋಟಿ ಗೆದಿದ್ದರು. ತೆರಿಗೆ ಎಲ್ಲಾ ಕಡಿತಗೊಂಡು 7.56 ಕೋಟಿ ರು. ಅಂತೂ ವಿಜಯನ್ ಕೈಸೇರಿತ್ತು. ಕೇರಳದ ಇಡುಕ್ಕಿಯಲ್ಲಿ ಬಡತನದಲ್ಲೇ ನರಳುತ್ತಿದ್ದ ಅನಂತು ಕುಟುಂಬಕ್ಕೆ ಮನೆ ರಿಪೇರಿ ಮಾಡಿಸಲು ಕೂಡ ಹಣವಿರಲಿಲ್ಲ. ಆದರೆ, ಲಾಟರಿ ಮೂಲಕ ಭಾಗ್ಯದ ಬಾಗಿಲು ತೆರೆದಿತ್ತು.
The lucky winner of the Thiruvonam bumper lottery has finally been identified Jayapalan, an auto driver from Maradu, Thrippunithura, has won the first prize of Rs 12 crore Jayapalan bought the ticket on the 10th of this month.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm