ಬ್ರೇಕಿಂಗ್ ನ್ಯೂಸ್
22-09-21 03:02 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಸೆ.21: ಕೆಲವೊಮ್ಮೆ ಅದೃಷ್ಟ ಲಕ್ಷ್ಮಿ ಒಲಿದರೆ ಬಡವನೂ ಕೋಟ್ಯಧಿಪತಿ ಆಗುತ್ತಾನೆ. ಹೌದು, ಈ ಬಾರಿ ಕೇರಳದ ಓಣಂ ಹಬ್ಬದ ಬಂಪರ್ ಲಾಟರಿ ಬಡ ಆಟೋ ಚಾಲಕನಿಗೆ ಒಲಿದಿದೆ. 12 ಕೋಟಿ ರೂ. ತಿರುವೋಣಂ ಬಂಪರ್ ಲಾಟರಿಯನ್ನು ಎರ್ನಾಕುಲಂ ಜಿಲ್ಲೆಯ ಆಟೋ ಚಾಲಕ ಜಯಪಾಲನ್ ಎಂಬಾತ ಗೆದ್ದಿದ್ದಾನೆ.
ಆಟೋರಿಕ್ಷಾ ಓಡಿಸುತ್ತಾ ಸಂಕಷ್ಟದಲ್ಲಿ ಜೀವನ ಸಾಗಿಸ್ತಿದ್ದ ಜಯಪಾಲನ್ಗೆ ದಿಢೀರ್ ಅದೃಷ್ಟ ಒಲಿದು ಬಂದಿದೆ. ಸಾಕಷ್ಟು ಜನರಿಗೆ ಲಕ್ ತಂದಿರುವ ಮೀನಾಕ್ಷಿ ಲಕ್ಕಿ ಸೆಂಟರ್ನಲ್ಲಿ ಜಯಪಾಲನ್ ಲಾಟರಿ ಖರೀದಿ ಮಾಡಿದ್ದರು. 12 ಕೋಟಿ ರೂ. ಮೊತ್ತದ ಲಾಟರಿಯಲ್ಲಿ ತೆರಿಗೆ ಎಲ್ಲಾ ಕಳೆದು ಸುಮಾರು 7.4 ಕೋಟಿ ರೂಪಾಯಿ ಜಯಪಾಲನ್ಗೆ ಸಿಗಲಿದೆ.
ಲಾಟರಿ ಟಿಕೆಟ್ ಪಡೆದಿದ್ದ ಜಯಪಾಲನ್ಗೆ ತನ್ನ ಟಿಕೆಟ್ ಫ್ಯಾನ್ಸಿ ನಂಬರ್ ಅನ್ನೋದು ತಿಳಿದಿರಲಿಲ್ಲ. ಟಿಕೆಟ್ ಸಂಖ್ಯೆ TE 645465 ಲಾಟರಿ ಗೆದ್ದಿದೆ ಎಂದು ಘೋಷಿಸಲಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಜಯಪಾಲನ್ ಕುಣಿದು ಕುಪ್ಪಳಿಸಿದ್ದಾರೆ. 300 ರೂ. ಬೆಲೆಯ ಲಾಟರಿ ಟಿಕೆಟ್ ಖರೀದಿಸಿ, 7 ಕೋಟಿ ಬಾಚಿದ್ದನ್ನು ಜಯಪಾಲನ್ ಗೆ ನಂಬಲು ಸಾಧ್ಯವಾಗುತ್ತಿಲ್ಲ. ಈ ಹಣವನ್ನು ಏನು ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಕೆಲವೊಂದು ಸಾಲ ಇದೆ, ಅದನ್ನು ತೀರಿಸ್ತೀನಿ. ಆನಂತರ ಮಕ್ಕಳ ಶಿಕ್ಷಣಕ್ಕೆ ವ್ಯಯ ಮಾಡ್ತೀನಿ ಎಂದು ಹೇಳಿದ್ದಾರೆ.





ದೇವಸ್ಥಾನದ ಗುಮಾಸ್ತ ಗೆದ್ದಿದ್ದ ಲಾಟರಿ !
2020ರಲ್ಲಿ ತಿರುವೋಣಂ ಲಾಟರಿಯನ್ನು ದೇವಸ್ಥಾನದ ಗುಮಾಸ್ತ ಗೆದ್ದಿದ್ದರು. ಇಡುಕ್ಕಿ ಮೂಲದ ಅನಂತು ವಿಜಯನ್ ಬರೋಬ್ಬರಿ 12 ಕೋಟಿ ಗೆದಿದ್ದರು. ತೆರಿಗೆ ಎಲ್ಲಾ ಕಡಿತಗೊಂಡು 7.56 ಕೋಟಿ ರು. ಅಂತೂ ವಿಜಯನ್ ಕೈಸೇರಿತ್ತು. ಕೇರಳದ ಇಡುಕ್ಕಿಯಲ್ಲಿ ಬಡತನದಲ್ಲೇ ನರಳುತ್ತಿದ್ದ ಅನಂತು ಕುಟುಂಬಕ್ಕೆ ಮನೆ ರಿಪೇರಿ ಮಾಡಿಸಲು ಕೂಡ ಹಣವಿರಲಿಲ್ಲ. ಆದರೆ, ಲಾಟರಿ ಮೂಲಕ ಭಾಗ್ಯದ ಬಾಗಿಲು ತೆರೆದಿತ್ತು.
The lucky winner of the Thiruvonam bumper lottery has finally been identified Jayapalan, an auto driver from Maradu, Thrippunithura, has won the first prize of Rs 12 crore Jayapalan bought the ticket on the 10th of this month.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm