ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm