ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm