ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm