ಬ್ರೇಕಿಂಗ್ ನ್ಯೂಸ್
29-09-21 05:15 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.29: ಬಿಟೆಕ್ ಓದುತ್ತಿದ್ದ ವಿದ್ಯಾರ್ಥಿಯನ್ನು ಮುಖಕ್ಕೆ ಏಸಿಡ್ ಎರಚಿ, ಸುಟ್ಟು ಹಾಕಿದ್ದಲ್ಲದೆ ಚೂರಿಯಿಂದ ತಿವಿದು ಭೀಕರವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಇತ್ತೀಚೆಗೆ ಪತ್ತೆಯಾಗಿತ್ತು. ಮುಖ, ದೇಹ ಅರೆಸುಟ್ಟ ಸ್ಥಿತಿಯಲ್ಲಿತ್ತು. ಹೀಗಾಗಿ ಪೋಸ್ಟ್ ಮಾರ್ಟಂ ಮಾಡಿದ್ದು ಅದರ ವರದಿಯಲ್ಲಿ ಯುವಕನನ್ನು ಭೀಕರವಾಗಿ ಕೊಲೆಗೈದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವೈದ್ಯರ ವರದಿ ಪ್ರಕಾರ, ಆತನ ದೇಹದಲ್ಲಿ 16 ಕಡೆಗಳಲ್ಲಿ ಚೂರಿಯಿಂದ ತಿವಿದ ಗಾಯಗಳಿದ್ದವು. ಅಲ್ಲದೆ, ಹೊಟ್ಟೆಯಲ್ಲಿ ಗ್ಲಾಸ್ ಚೂರು ಸಿಕ್ಕಿದ್ದು, ಬಾಟಲಿಯನ್ನು ಒಡೆದು ಹೊಟ್ಟೆಗೆ ಇರಿದಿರುವ ಬಗ್ಗೆ ಶಂಕಿಸಲಾಗಿದೆ.

23 ವರ್ಷದ ಸುಧೀರ್ ಸೈನಿ ಎನ್ನುವ ಯುವಕ ಕೊಲೆಯಾದ ವಿದ್ಯಾರ್ಥಿಯಾಗಿದ್ದು ಆತನಿಗೆ ಸಹಪಾಠಿ ವಿದ್ಯಾರ್ಥಿನಿ ಜೊತೆ ಪ್ರೀತಿ ಇತ್ತು ಎನ್ನಲಾಗಿತ್ತು. ಆಕೆಯ ಜೊತೆ ಮಾತನಾಡುವುದಕ್ಕಾಗಿ ಮೊರದಾಬಾದ್ ಜಿಲ್ಲೆಯ ಮಜೋಲಾ ಎಂಬಲ್ಲಿಗೆ ತೆರಳಿದ್ದು, ಆ ಸಂದರ್ಭದಲ್ಲಿ ಹುಡುಗಿಯ ಸಂಬಂಧಿಕರು ಸೇರಿ ಹಲ್ಲೆ ನಡೆಸಿದ್ದಾರೆ. ಆನಂತರ, ಯುವಕನ ಶವ ಮುಂಧಾ ಪಾಂಡೆ ಎನ್ನುವ ಪ್ರದೇಶದಲ್ಲಿ ಪತ್ತೆಯಾಗಿತ್ತು.
ಕೊಲೆಗೂ ಮುನ್ನ ಯುವಕನಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಮುಖ ಪೂರ್ತಿ ಸುಟ್ಟು ಹೋಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಜೇಬಿನಲ್ಲಿದ್ದ ಐಡೆಂಟಿ ಕಾರ್ಡ್ ಆಧಾರದಲ್ಲಿ ಪತ್ತೆ ಕಾರ್ಯ ನಡೆಸಲಾಗಿತ್ತು. ಬರೇಲಿ ನಿವಾಸಿಯಾಗಿದ್ದ ಸುಧೀರ್ ಸೈನಿ, ಕಾಲೇಜಿಗೆ ತೆರಳಿದ್ದಾತ ನಾಪತ್ತೆಯಾಗಿದ್ದ. ಆನಂತರ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
A BTech student was allegedly killed by the family members of a woman he was in a relationship in Uttar Pradesh's Moradabad district. He was stabbed at least 16 times while his face was burnt with acid and glass pieces were found in his stomach, his post-mortem report revealed, police said.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm