ಬ್ರೇಕಿಂಗ್ ನ್ಯೂಸ್
30-09-21 03:42 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.30: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಅಮಿತ್ ಷಾ ಭೇಟಿಯ ಮರುದಿನವೇ ಅಮರಿಂದರ್ ಸಿಂಗ್ ಹೇಳಿಕೆ ನೀಡಿದ್ದು, ಬಿಜೆಪಿ ಸೇರುವುದಿಲ್ಲ. ಹಾಗೆಂದು ಕಾಂಗ್ರೆಸ್ ನಲ್ಲಿ ಮುಂದುವರಿಯೋದೂ ಇಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಈವಾಗಲೂ ಕಾಂಗ್ರೆಸಿನಲ್ಲೇ ಇದ್ದೇನೆ. ಹಾಗಂತ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯೋದಿಲ್ಲ. ಈ ರೀತಿಯ ವಾತಾವರಣದಲ್ಲಿ ನಾನು ಕಾಂಗ್ರೆಸಿನಲ್ಲಿ ಇರಲಾರೆ ಎಂದು ಅಮರಿಂದರ್ ಸಿಂಗ್ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ವಾರದ ಹಿಂದೆ ಸಿಎಂ ಸ್ಥಾನದಿಂದ ಇಳಿದಿದ್ದ ಅಮರಿಂದರ್ ಸಿಂಗ್, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ನಾನಾ ಊಹೋಪೋಹಗಳಿಗೆ ಕಾರಣವಾಗಿತ್ತು.


ಇದರ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಅಮರಿಂದರ್ ಸಿಂಗ್ ಭೇಟಿಯಾಗಿದ್ದರು. ಅಮಿತ್ ಷಾ ಭೇಟಿಯ ಬಳಿಕ ಟ್ವೀಟ್ ಮಾಡಿದ್ದ ಅಮರಿಂದರ್ ಸಿಂಗ್, ಕೇಂದ್ರ ಸಚಿವರನ್ನು ಭೇಟಿಯಾಗಿ ಕೃಷಿ ಮಸೂದೆಯ ಕುರಿತ ಜಟಾಪಟಿಗೆ ಕೊನೆ ಹಾಡುವಂತೆ ಕೇಳಿಕೊಂಡಿದ್ದೇನೆ. ಪಂಜಾಬ್ ನಲ್ಲಿ ಈ ಮಸೂದೆಯ ಕಾರಣದಿಂದ ರೈತರು ಸಂಕಷ್ಟಕ್ಕೀಡಾಗಿರುವುದನ್ನು ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದರು.
ಇದರ ನಡುವಲ್ಲೇ ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದರು. ಇವೆಲ್ಲ ಬೆಳವಣಿಗೆಯ ಮಧ್ಯೆ ಅಮರಿಂದ್ ಸಿಂಗ್ ತಾನೂ ಕಾಂಗ್ರೆಸಿನಲ್ಲಿ ಉಳಿಯಲ್ಲ, ಬಿಜೆಪಿ ಸೇರಲ್ಲ ಎನ್ನುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಕಾಂಗ್ರೆಸಿನಲ್ಲೇ ಮಹತ್ವದ ಸ್ಥಾನ ಸಿಕ್ಕರೆ ಉಳಿಯುತ್ತಾರೆಯೇ ಅಥವಾ ಆಪ್ ಪಕ್ಷದತ್ತ ಮುಖ ಮಾಡಿದ್ದಾರೆಯೇ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಪಂಜಾಬ್ ನಲ್ಲಿ ಮುಂದಿನ ವರ್ಷದಲ್ಲೇ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಪ್ ಪಕ್ಷಗಳು ಭಾರೀ ಕಸರತ್ತಿನಲ್ಲಿ ತೊಡಗಿವೆ.
A day after meeting Union Home Minister Amit Shah at his residence in Delhi, former Punjab CM Capt Amarinder Singh has said that he is not joining the Bharatiya Janata Party (BJP).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm