ಬ್ರೇಕಿಂಗ್ ನ್ಯೂಸ್
30-09-21 03:42 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.30: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಅಮಿತ್ ಷಾ ಭೇಟಿಯ ಮರುದಿನವೇ ಅಮರಿಂದರ್ ಸಿಂಗ್ ಹೇಳಿಕೆ ನೀಡಿದ್ದು, ಬಿಜೆಪಿ ಸೇರುವುದಿಲ್ಲ. ಹಾಗೆಂದು ಕಾಂಗ್ರೆಸ್ ನಲ್ಲಿ ಮುಂದುವರಿಯೋದೂ ಇಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಈವಾಗಲೂ ಕಾಂಗ್ರೆಸಿನಲ್ಲೇ ಇದ್ದೇನೆ. ಹಾಗಂತ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯೋದಿಲ್ಲ. ಈ ರೀತಿಯ ವಾತಾವರಣದಲ್ಲಿ ನಾನು ಕಾಂಗ್ರೆಸಿನಲ್ಲಿ ಇರಲಾರೆ ಎಂದು ಅಮರಿಂದರ್ ಸಿಂಗ್ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ವಾರದ ಹಿಂದೆ ಸಿಎಂ ಸ್ಥಾನದಿಂದ ಇಳಿದಿದ್ದ ಅಮರಿಂದರ್ ಸಿಂಗ್, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ನಾನಾ ಊಹೋಪೋಹಗಳಿಗೆ ಕಾರಣವಾಗಿತ್ತು.


ಇದರ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಅಮರಿಂದರ್ ಸಿಂಗ್ ಭೇಟಿಯಾಗಿದ್ದರು. ಅಮಿತ್ ಷಾ ಭೇಟಿಯ ಬಳಿಕ ಟ್ವೀಟ್ ಮಾಡಿದ್ದ ಅಮರಿಂದರ್ ಸಿಂಗ್, ಕೇಂದ್ರ ಸಚಿವರನ್ನು ಭೇಟಿಯಾಗಿ ಕೃಷಿ ಮಸೂದೆಯ ಕುರಿತ ಜಟಾಪಟಿಗೆ ಕೊನೆ ಹಾಡುವಂತೆ ಕೇಳಿಕೊಂಡಿದ್ದೇನೆ. ಪಂಜಾಬ್ ನಲ್ಲಿ ಈ ಮಸೂದೆಯ ಕಾರಣದಿಂದ ರೈತರು ಸಂಕಷ್ಟಕ್ಕೀಡಾಗಿರುವುದನ್ನು ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದರು.
ಇದರ ನಡುವಲ್ಲೇ ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದರು. ಇವೆಲ್ಲ ಬೆಳವಣಿಗೆಯ ಮಧ್ಯೆ ಅಮರಿಂದ್ ಸಿಂಗ್ ತಾನೂ ಕಾಂಗ್ರೆಸಿನಲ್ಲಿ ಉಳಿಯಲ್ಲ, ಬಿಜೆಪಿ ಸೇರಲ್ಲ ಎನ್ನುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಕಾಂಗ್ರೆಸಿನಲ್ಲೇ ಮಹತ್ವದ ಸ್ಥಾನ ಸಿಕ್ಕರೆ ಉಳಿಯುತ್ತಾರೆಯೇ ಅಥವಾ ಆಪ್ ಪಕ್ಷದತ್ತ ಮುಖ ಮಾಡಿದ್ದಾರೆಯೇ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಪಂಜಾಬ್ ನಲ್ಲಿ ಮುಂದಿನ ವರ್ಷದಲ್ಲೇ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಪ್ ಪಕ್ಷಗಳು ಭಾರೀ ಕಸರತ್ತಿನಲ್ಲಿ ತೊಡಗಿವೆ.
A day after meeting Union Home Minister Amit Shah at his residence in Delhi, former Punjab CM Capt Amarinder Singh has said that he is not joining the Bharatiya Janata Party (BJP).
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm