ಬ್ರೇಕಿಂಗ್ ನ್ಯೂಸ್
07-10-21 02:13 pm Headline Karnataka News Network ದೇಶ - ವಿದೇಶ
ಹೃಷಿಕೇಶ್, ಅ.7: ಸಾರ್ವಜನಿಕ ಜೀವನ ಪ್ರವೇಶಿಸಿ ಹಲವು ದಶಕಗಳಾಗಿವೆ. 2001ರಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಲಭಿಸಿತ್ತು. ಜನರ ಬೆಂಬಲದಿಂದ ಪ್ರಧಾನಿಯೂ ಆಗಿದ್ದೇನೆ. ಆದರೆ, ಮುಂದೊಂದು ದಿನ ಪ್ರಧಾನಿಯಾಗುತ್ತೇನೆಂದು ಯಾವತ್ತೂ ಕನಸಲ್ಲೂ ಅನ್ಕೊಂಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ, ಸಾಂವಿಧಾನಿಕ ಹುದ್ದೆ ಸ್ವೀಕರಿಸಿ ಅ.7ಕ್ಕೆ 20 ವರ್ಷ ಪೂರೈಸುತ್ತಿದ್ದು, ದೇಶಾದ್ಯಂತ ಇದೇ ದಿನ ಆಕ್ಸಿಜನ್ ಘಟಕಗಳ ಉದ್ಘಾಟನೆ ನಡೆಸಲಾಗುತ್ತಿದೆ.
ಆಕ್ಸಿಜನ್ ಘಟಕದ ಉದ್ಘಾಟನೆ ನಿಮಿತ್ತ ಉತ್ತರಾಖಂಡ್ ರಾಜ್ಯದ ಹೃಷಿಕೇಶಕ್ಕೆ ತೆರಳಿರುವ ಮೋದಿ, ಏಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟಿಸಿ ಮಾತನಾಡಿದರು. ಪಿಎಂ ಕೇರ್ ಫಂಡ್ ಅಡಿ ದೇಶದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್ ಪ್ಲಾಂಟ್ ಏಕಕಾಲದಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ನೆರವೇರಿಸಲಾಗಿದೆ.
ಕಡಿಮೆ ಅವಧಿಯಲ್ಲಿ ದೇಶದಲ್ಲೀಗ ಆಕ್ಸಿಜನ್ ಪ್ಲಾಂಟ್, ಕೋವಿನ್ ಟೆಸ್ಟಿಂಗ್ ಲ್ಯಾಬ್ ಆಗಿದೆ. ಅಗತ್ಯ ಮೂಲಸೌಲಭ್ಯಗಳನ್ನು ಪೂರೈಸಿಕೊಂಡಿದ್ದು ದೇಶದ ಸಾಮರ್ಥ್ಯವನ್ನು ತೋರಿಸಿದ್ದೇವೆ. ಭಾರತ ಈಗ ಕೋವಿಡ್ ಲಸಿಕೆ, ಕಿಟ್, ಮಾಸ್ಕ್ ಇನ್ನಿತರ ಉತ್ಪನ್ನಗಳನ್ನು ವಿದೇಶಗಳಿಗೆ ಪೂರೆಕೆಯನ್ನೂ ಮಾಡುತ್ತಿದೆ. ದೇಶಾದ್ಯಂತ ಕೋವಿಡ್ ಲಸಿಕೆಯನ್ನೂ ನೀಡಿದ್ದಲ್ಲದೆ, ಸಾಗರ ಮತ್ತು ಕಾಡಿನ ಮಧ್ಯೆ ಇರುವ ಜನರಿಗೂ ಲಸಿಕೆ ತಲುಪಿಸಿದ್ದೇವೆ ಎಂದು ಮೋದಿ ಹೇಳಿದರು.
ಇದೇ ವೇಳೆ, ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೋದಿಯವರನ್ನು ಶ್ಲಾಘಿಸುತ್ತಾ ಸಾರ್ವಜನಿಕ ಜೀವನದ 20 ವರ್ಷಗಳನ್ನು ಪೂರೈಸಿದ ದಿನವೇ ನಮ್ಮಲ್ಲಿಗೆ ಆಗಮಿಸಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಈಗ ಜಗತ್ತಿನ ಅತ್ಯಂತ ಪ್ರಭಾವಿ ನಾಯಕ. ಅವರು ಇಂದು ದೇವಭೂಮಿಗೆ ಬಂದಿದ್ದು ಶುಭದ ಸೂಚನೆ. ಈ ಕ್ಷಣಕ್ಕಾಗಿ ನಾವು ಕಾಯುತ್ತಿದ್ದೆವು ಎಂದು ಧಾಮಿ ಹೇಳಿದರು.
2001ರಲ್ಲಿ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ಆ ಹುದ್ದೆಯಲ್ಲಿ 13 ವರ್ಷ ಪೂರೈಸಿದ್ದರು. ಆನಂತರ, ಮುಖ್ಯಮಂತ್ರಿಯಾಗಿದ್ದೇ ಪ್ರಧಾನಿ ಹುದ್ದೆಗೇರಿದ್ದು ಈಗ ಏಳು ವರ್ಷ ಪೂರೈಸಿದ್ದಾರೆ. ಇದೇ ಕಾರಣಕ್ಕೆ, ಮೋದಿ ತಮ್ಮ ಭಾಷಣದ ನಡುವೆ 21ನೇ ವರ್ಷವನ್ನು ನಾನು ಹೃಷಿಕೇಶದಿಂದ ಆರಂಭಿಸುತ್ತೇನೆ ಎಂದು ಹೇಳಿದ್ದು ವಿಶೇಷ.
Prime Minister Narendra Modi completed 20 years of public life and on Thursday he said that he had never thought that he will be the Prime Minister one day. PM Modi was speaking at AIIMS Rishikesh where he dedicated 35 Pressure Swing Adsorption (PSA) oxygen plants that were installed under the PM-CARES fund across 35 States and Union Territories.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm