ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.

ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm