ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.
ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am