ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.

ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm