ಮರಳು ಲಾರಿಗೆ ಬಸ್ ಡಿಕ್ಕಿ ; 9 ಪ್ರಯಾಣಿಕರು ಸ್ಥಳದಲ್ಲೇ ಸಾವು !

08-10-21 03:37 pm       Headline Karnataka News Network   ದೇಶ - ವಿದೇಶ

ಮರಳು ತುಂಬಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ

ಬರಾಬಂಕಿ, ಅ.08 :  ಮರಳು ತುಂಬಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.  

ಬರಾಬಂಕಿ ಜಿಲ್ಲೆಯ ಬಬೂರಿ ಗ್ರಾಮದ ಸಮೀಪ ಲಾರಿಗೆ ಬಸ್ ಡಿಕ್ಕಿ ಹೊಡೆದು ಒಂಬತ್ತು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿಯಿಂದ ಬಹರೀಚ್‍ಗೆ ತೆರಳುತ್ತಿದ್ದ ಬಸ್‍ನಲ್ಲಿ 70 ಪ್ರಯಾಣಿಕರಿದ್ದರು. ರಸ್ತೆಯಲ್ಲಿ ನಿಂತಿದ್ದ ಹಸುವನ್ನು ರಕ್ಷಿಸಲು ಹೋದ ಚಾಲಕ ಮರುಳು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಕಾರಿ ಯಮುನಾ ಪ್ರಸಾದ್ ತಿಳಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಲಕ್ನೋ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂ.ಗಳ ಪರಿಹಾರ ಧನ ಘೋಷಿಸಿದ್ದಾರೆ. ಮಾತ್ರವಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

In a horrific road accident, at least nine people were killed and 27 suffered injuries after a double-decker bus collided head-on with a truck in Uttar Pradesh’s Barabanki district. UP chief minister Yogi Adityanath has announced an ex gratia of Rs 2 lakh each to the kin of the deceased and Rs 50,000 to the injured while expressing condolences. Police officers in Barabanki said that prima facie it seems that the truck was coming from the wrong side and while trying to save a stray cow, lost control and rammed into the bus. The bus was on its way to Bahraich from Delhi.