ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm