ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm