ಬ್ರೇಕಿಂಗ್ ನ್ಯೂಸ್
11-09-20 11:35 am Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 11: ತನ್ನ ಮನೆಯನ್ನು ಕೆಡವಿದ ಸಿಟ್ಟಿನಲ್ಲಿರುವ ನಟಿ ಕಂಗನಾ ರನೌತ್ ಮತ್ತೆ ಶಿವಸೇನೆಯ ವಿರುದ್ಧ ಹರಿಹಾಯ್ದಿದ್ದಾರೆ. ಉದ್ಧವ್ ಠಾಕ್ರೆ ಹೆಸರೆತ್ತದೆ ಟ್ವೀಟ್ ವಾರ್ ನಡೆಸಿರುವ ಕಂಗನಾ, ಅಧಿಕಾರಕ್ಕಾಗಿ ತಮ್ಮ ಸಿದ್ಧಾಂತವನ್ನು ಮಾರಿಕೊಂಡಿರುವ ಶಿವಸೇನೆ ಈಗ ಸೋನಿಯಾ ಸೇನೆ ಆಗಿಹೋಗಿದೆ ಎಂದು ಮೂದಲಿಸಿದ್ದಾರೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತ ಶಿವಸೇನೆ ಅಧಿಕಾರಕ್ಕಾಗಿ ನಾಚಿಕೆ ಇಲ್ಲದೆ ಹಿಂಬಾಗಿಲ ಮೂಲಕ ಮೈತ್ರಿ ಸರಕಾರ ಮಾಡಿಕೊಂಡಿದೆ. ಆಮೂಲಕ ಶಿವಸೇನೆ ಸೋನಿಯಾ ಸೇನೆ ಆಗಿ ಪರಿವರ್ತನೆ ಆಗುವಂತಾಗಿದೆ ಎಂದು ಹೇಳಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ಒಂದು ಸಿದ್ಧಾಂತ ಇಟ್ಟುಕೊಂಡು ಶಿವಸೇನೆಯನ್ನು ಕಟ್ಟಿ ಬೆಳೆಸಿದ್ದರು. ಆದರೆ ಇಂದಿನವರು ಆ ಸಿದ್ಧಾಂತವನ್ನೇ ಮಾರಿಕೊಂಡಿದ್ದಾರೆ. ನಾನು ಇಲ್ಲದಿರುವ ವೇಳೆಯಲ್ಲಿ ನನ್ನ ಮನೆಯನ್ನು ಕೆಡವಿದ ಗೂಂಡಾಗಳನ್ನು ಆಡಳಿತದ ಒಂದು ಅಂಗ ಎನ್ನುವುದಿಲ್ಲ. ಹಾಗೆ ಹೇಳಿ ಸಂವಿಧಾನವನ್ನು ಅಪಮಾನಿಸಲು ಬಯಸುವುದಿಲ್ಲ ಎಂದಿದ್ದಾರೆ.

"ನಿಮ್ಮ ತಂದೆಯ ಒಳ್ಳೆತನದಿಂದ ನೀವು ಸಂಪತ್ತು ಪಡೆದಿರಬಹುದು. ಆದರೆ ನೀವು ಗೌರವ ಬೇಕಿದ್ದರೆ ಅದನ್ನು ಸ್ವತಃ ಗಳಿಸಬೇಕು. ನನ್ನ ಧ್ವನಿಯನ್ನು ನೀವು ಚಿವುಟಬಹುದು. ಆದರೆ ನನ್ನ ಧ್ವನಿ ಸಾವಿರ, ಲಕ್ಷಗಳ ಸಂಖ್ಯೆಯಲ್ಲಿ ಪರಿವರ್ತನೆ ಆಗಿ ನಿಮ್ಮತ್ತ ತೂರಿ ಬರಲಿದೆ. ಹಾಗಾದಾಗ, ನೀವು ಎಷ್ಟು ಮಂದಿಯ ಧ್ವನಿಯನ್ನು ಹತ್ತಿಕ್ಕಬಹುದು. ಸತ್ಯ ಮುಚ್ಚಿಟ್ಟು ಎಷ್ಟು ದಿನ ಓಡಾಡಬಹುದು. ನಿಮ್ಮ ಆಡಳಿತ ಸರ್ವಾಧಿಕಾರಿಯ ರಾಜಪ್ರಭುತ್ವ ಅಷ್ಟೇ ವಿನಾ ಬೇರೇನೂ ಅಲ್ಲ " ಎಂದು ಕಂಗನಾ ಕಟು ಮಾತುಗಳಿಂದ ತಿವಿದಿದ್ದಾರೆ.
ಶಿವಸೇನೆ ಆಗಲೀ, ಮಹಾರಾಷ್ಟ್ರ ಸರಕಾರದಿಂದ ಆಗಲೀ ಕಂಗನಾ ಟ್ವೀಟ್ ಬಗ್ಗೆ ಉತ್ತರ ನೀಡಲು ಮುಂದಾಗಿಲ್ಲ. ಶಿವಸೇನೆಯ ಯಾರು ಕೂಡ ತುಟಿ ಬಿಚ್ಚಬಾರದು ಎಂದು ಹುಕುಂ ಜಾರಿ ಮಾಡಲಾಗಿದೆ. ಅಗತ್ಯ ಬಿದ್ದರೆ ಪಕ್ಷದ ವಕ್ತಾರ ಸಂಜಯ್ ರಾವತ್ ಮಾತಾಡುತ್ತಾರೆ ಎನ್ನುವ ಸೂಚನೆ ನೀಡಲಾಗಿದೆ. ಆದರೆ ಚಿತ್ರನಟಿಯ ತಿವಿಯುವ ಬಾಣಗಳಿಗೆ ಉತ್ತರ ನೀಡಲು ರಾವುತ್ ಕೂಡ ಮುಂದೆ ಬಂದಿಲ್ಲ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm