ಬ್ರೇಕಿಂಗ್ ನ್ಯೂಸ್
14-10-21 07:10 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.14: ಇತ್ತೀಚೆಗೆ ಲಖೀಮ್ ಪುರ್ ಖೇರಿಯಲ್ಲಿ ರೈತರ ಮೇಲಿನ ದಾಳಿ ಘಟನೆಯನ್ನು ಖಂಡಿಸಿ ಪಕ್ಷದ ರಾಷ್ಟ್ರೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ಸಂಸದ ವರುಣ್ ಗಾಂಧಿ ಇದೀಗ ಮಾಜಿ ಪ್ರಧಾನಿ ವಾಜಪೇಯಿಯವರು 1980 ರಲ್ಲಿ ರೈತರ ಪರ ಮಾಡಿದ್ದ ಭಾಷಣದ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ವಾಜಪೇಯಿ ಅವರು ರೈತರ ಮೇಲೆ ದಬ್ಬಾಳಿಕೆ ನಡೆಸದಂತೆ ಅಂದಿನ ಇಂದಿರಾ ಗಾಂಧಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ವಾಜಪೇಯಿ ರೈತರನ್ನು ಬೆಂಬಲಿಸಿದ್ದ ವಿಡಿಯೋ ತುಣುಕನ್ನು ಹಂಚಿಕೊಂಡಿರುವ ವರುಣ್ ಗಾಂಧಿ ಪರೋಕ್ಷವಾಗಿ ಕೇಂದ್ರ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಕೇಂದ್ರ ಸರಕಾರದ ಮೂರು ಪ್ರಸ್ತಾವಿತ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ, ರೈತರು ಕೇಂದ್ರ ಸರಕಾರದ ಜೊತೆ ನಡೆಸಿರುವ ಹಲವು ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಇದೀಗ ವಾಜಪೇಯಿಯವರು ರೈತರ ಬಗ್ಗೆ ಆಡಿದ್ದ ಮಾತುಗಳನ್ನು ವರುಣ್ ಗಾಂಧಿ ಟ್ವೀಟ್ ಮಾಡುವ ಮೂಲಕ ಹಳೆಯದನ್ನು ಮೆಲುಕು ಹಾಕುವಂತೆ ಸಲಹೆ ಮಾಡಿದ್ದಾರೆ.
ವಿಶಾಲ ಹೃದಯದ ನಾಯಕನ ಜಾಣ್ಮೆಯ ಮಾತುಗಳು ಎಂದು ಬಣ್ಣಿಸಿ, ವಾಜಪೇಯಿ ಮಾತುಗಳ ತುಣುಕನ್ನು ಟ್ವೀಟ್ ಮಾಡಿದ್ದಾರೆ. ಆಗ ವಿರೋಧ ಪಕ್ಷದಲ್ಲಿದ್ದ ವಾಜಪೇಯಿ, ಸರಕಾರವು ರೈತರನ್ನು ದಮನಿಸಿದರೆ, ಕಾನೂನು ಪ್ರಯೋಗಿಸಿ ಹತ್ತಿಕ್ಕಲು ಯತ್ನಿಸಿದರೆ ನಾವು ರೈತರ ಜೊತೆಗೆ ನಿಲ್ಲಲು ಹಿಂಜರಿಯಲ್ಲ. ರೈತರು ಸರಕಾರದ ಗೊಡ್ಡು ಬೆದರಿಕೆಗೆ ಹಿಂಜರಿಯದಿರಿ ಎಂದು ಹೇಳಿದ್ದರು.
ಇತ್ತೀಚೆಗೆ ಲಖೀಮ್ ಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಮತ್ತು ರೈತರ ಮೇಲೆ ಜೀಪು ಹರಿಸಿದ ವಿಡಿಯೋ ತುಣುಕನ್ನು ಟ್ವೀಟ್ ಮಾಡಿದ್ದ ವರುಣ್ ಗಾಂಧಿ, ತಪ್ಪಿತಸ್ಥರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅದರ ಬೆನ್ನಲ್ಲೇ ವರುಣ್ ಗಾಂಧಿ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ತೆಗೆದು ಹಾಕಲಾಗಿತ್ತು.
Wise words from a big-hearted leader… pic.twitter.com/xlRtznjFAx
— Varun Gandhi (@varungandhi80) October 14, 2021
BJP MP Varun Gandhi - dumped from his party's National Executive this month after calling for justice for the families of farmers killed in UP's Lakhimpur Kheri, and speaking out in support of other farmers protesting the centre's new laws - is in no mood to back down. This morning Mr Gandhi tweeted an undated video of (a very young-looking) Atal Bihari Vajpayee, in which the late former Prime Minister warns the government against intimidating farmers.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm