ಬ್ರೇಕಿಂಗ್ ನ್ಯೂಸ್
11-09-20 01:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ದೇಶದ ಮೊದಲ ಕಿಸಾನ್ ರೈಲು ತರಕಾರಿಗಳನ್ನು ಹೊತ್ತುಕೊಂಡು ರಾಜಧಾನಿ ದೆಹಲಿ ತಲುಪಿದೆ. ನಿನ್ನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಹೊರಟ ರೈಲು ಇಂದು ಬೆಳಗ್ಗೆ ದೆಹಲಿ ತಲುಪಿತು.
322 ಟನ್ ಹಣ್ಣು ಮತ್ತು ತರಕಾರಿಗಳನ್ನು ಹೊತ್ತು ಹೊರಟ ಕಿಸಾನ್ ರೈಲಿಗೆ ನಿನ್ನೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ಮೋಹನ್ ರೆಡ್ಡಿ ನವದೆಹಲಿ ಮತ್ತು ಅಮರಾವತಿಯಿಂದ ವಿಡಿಯೋ ಲಿಂಕ್ ಮೂಲಕ ಚಾಲನೆ ನೀಡಿದ್ದರು. ಮೊದಲ ಕಿಸಾನ್ ರೈಲಿನಲ್ಲಿ ಟೊಮ್ಯಾಟೊ, ಬಾಳೆಹಣ್ಣು, ಸಿಹಿ ಕಿತ್ತಳೆ ಹಣ್ಣು, ಪಪ್ಪಾಯ, ಮಸ್ಕ್ ಮೆಲನ್, ಮಾವಿನ ಹಣ್ಣು ಸೇರಿ ಹಲವು ಹಣ್ಣು ಮತ್ತು ತರಕಾರಿಗಳಿದ್ದವು.
ಈ ಹೊಸ ಕಿಸಾನ್ ರೈಲು ತರಕಾರಿ, ಹಣ್ಣು ಹಂಪಲುಗಳನ್ನು ಕಡಿಮೆ ಸಮಯದಲ್ಲಿ ರಾಜಧಾನಿ ತಲುಪಿಸುತ್ತದೆ. ಅನಂತಪುರದಿಂದ ದೆಹಲಿಗೆ 2150 ಕಿಮೀ ದೂರ ಇದ್ದು ರಸ್ತೆ ಮಾರ್ಗದಲ್ಲಿ 40 ಗಂಟೆ ಬೇಕಾದರೆ ರೈಲಿನಲ್ಲಿ 16-18 ಗಂಟೆಗಳಲ್ಲಿ ಮುಟ್ಟಬಹುದು. ಅನಂತಪುರ ಅತಿ ಹೆಚ್ಚು ಹಣ್ಣುಗಳ ಉತ್ಪಾದಿಸುವ ಜಿಲ್ಲೆಯಾಗಿದ್ದು ಉತ್ಪಾದನೆಯಾಗುವ 58 ಲಕ್ಷ ಮೆಟ್ರಿಕ್ ಟನ್ ಹಣ್ಣು, ತರಕಾರಿಯ 80 ಶೇಕಡಾ ಉತ್ತರ ಭಾರತದ ರಾಜ್ಯಗಳಿಗೆ ರವಾನೆಯಾಗುತ್ತದೆ. ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಿಗೆ ರಸ್ತೆ ಮೂಲಕ ಹಣ್ಣು ತರಕಾರಿ ಸಾಗಿಸಲು ಕಷ್ಟಪಡುತ್ತಿದ್ದರು. ವಾಹನಗಳಲ್ಲಿ ಮೂರ್ನಾಲ್ಕು ದಿನಗಳಾದರೆ ಹಾಳಾಗಿ ಹೋಗ್ತಿತ್ತು. ಹೀಗಾಗಿ ಅಲ್ಲಿನ ಕೃಷಿಕರು ಮತ್ತು ವ್ಯಾಪಾರಿಗಳಿಗೆ ಸಾಗಾಟದ ಸಾರಿಗೆ ವ್ಯವಸ್ಥೆಯೇ ವೆಚ್ಚದಾಯಕ ಮತ್ತು ಕಷ್ಟದ ಹಾದಿಯಾಗಿತ್ತು. ಈಗ ಕಿಸಾನ್ ರೈಲು ಅಲ್ಲಿನ ಕೃಷಿಕರಿಗೆ ವರದಾನವಾಗಿದೆ. ಸದ್ಯಕ್ಕೆ ವಾರಕ್ಕೊಮ್ಮೆ ರೈಲು ವ್ಯವಸ್ಥೆ ಮಾಡಲಾಗಿದ್ದು ಅಗತ್ಯ ನೋಡಿಕೊಂಡು ಓಡಾಟ ಕಲ್ಪಿಸುವ ಭರವಸೆಯನ್ನು ರೈಲ್ವೇ ಇಲಾಖೆ ನೀಡಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 02:39 pm
HK News Staffer
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm