ಬ್ರೇಕಿಂಗ್ ನ್ಯೂಸ್
11-09-20 01:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ದೇಶದ ಮೊದಲ ಕಿಸಾನ್ ರೈಲು ತರಕಾರಿಗಳನ್ನು ಹೊತ್ತುಕೊಂಡು ರಾಜಧಾನಿ ದೆಹಲಿ ತಲುಪಿದೆ. ನಿನ್ನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಹೊರಟ ರೈಲು ಇಂದು ಬೆಳಗ್ಗೆ ದೆಹಲಿ ತಲುಪಿತು.
322 ಟನ್ ಹಣ್ಣು ಮತ್ತು ತರಕಾರಿಗಳನ್ನು ಹೊತ್ತು ಹೊರಟ ಕಿಸಾನ್ ರೈಲಿಗೆ ನಿನ್ನೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ಮೋಹನ್ ರೆಡ್ಡಿ ನವದೆಹಲಿ ಮತ್ತು ಅಮರಾವತಿಯಿಂದ ವಿಡಿಯೋ ಲಿಂಕ್ ಮೂಲಕ ಚಾಲನೆ ನೀಡಿದ್ದರು. ಮೊದಲ ಕಿಸಾನ್ ರೈಲಿನಲ್ಲಿ ಟೊಮ್ಯಾಟೊ, ಬಾಳೆಹಣ್ಣು, ಸಿಹಿ ಕಿತ್ತಳೆ ಹಣ್ಣು, ಪಪ್ಪಾಯ, ಮಸ್ಕ್ ಮೆಲನ್, ಮಾವಿನ ಹಣ್ಣು ಸೇರಿ ಹಲವು ಹಣ್ಣು ಮತ್ತು ತರಕಾರಿಗಳಿದ್ದವು.
ಈ ಹೊಸ ಕಿಸಾನ್ ರೈಲು ತರಕಾರಿ, ಹಣ್ಣು ಹಂಪಲುಗಳನ್ನು ಕಡಿಮೆ ಸಮಯದಲ್ಲಿ ರಾಜಧಾನಿ ತಲುಪಿಸುತ್ತದೆ. ಅನಂತಪುರದಿಂದ ದೆಹಲಿಗೆ 2150 ಕಿಮೀ ದೂರ ಇದ್ದು ರಸ್ತೆ ಮಾರ್ಗದಲ್ಲಿ 40 ಗಂಟೆ ಬೇಕಾದರೆ ರೈಲಿನಲ್ಲಿ 16-18 ಗಂಟೆಗಳಲ್ಲಿ ಮುಟ್ಟಬಹುದು. ಅನಂತಪುರ ಅತಿ ಹೆಚ್ಚು ಹಣ್ಣುಗಳ ಉತ್ಪಾದಿಸುವ ಜಿಲ್ಲೆಯಾಗಿದ್ದು ಉತ್ಪಾದನೆಯಾಗುವ 58 ಲಕ್ಷ ಮೆಟ್ರಿಕ್ ಟನ್ ಹಣ್ಣು, ತರಕಾರಿಯ 80 ಶೇಕಡಾ ಉತ್ತರ ಭಾರತದ ರಾಜ್ಯಗಳಿಗೆ ರವಾನೆಯಾಗುತ್ತದೆ. ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಿಗೆ ರಸ್ತೆ ಮೂಲಕ ಹಣ್ಣು ತರಕಾರಿ ಸಾಗಿಸಲು ಕಷ್ಟಪಡುತ್ತಿದ್ದರು. ವಾಹನಗಳಲ್ಲಿ ಮೂರ್ನಾಲ್ಕು ದಿನಗಳಾದರೆ ಹಾಳಾಗಿ ಹೋಗ್ತಿತ್ತು. ಹೀಗಾಗಿ ಅಲ್ಲಿನ ಕೃಷಿಕರು ಮತ್ತು ವ್ಯಾಪಾರಿಗಳಿಗೆ ಸಾಗಾಟದ ಸಾರಿಗೆ ವ್ಯವಸ್ಥೆಯೇ ವೆಚ್ಚದಾಯಕ ಮತ್ತು ಕಷ್ಟದ ಹಾದಿಯಾಗಿತ್ತು. ಈಗ ಕಿಸಾನ್ ರೈಲು ಅಲ್ಲಿನ ಕೃಷಿಕರಿಗೆ ವರದಾನವಾಗಿದೆ. ಸದ್ಯಕ್ಕೆ ವಾರಕ್ಕೊಮ್ಮೆ ರೈಲು ವ್ಯವಸ್ಥೆ ಮಾಡಲಾಗಿದ್ದು ಅಗತ್ಯ ನೋಡಿಕೊಂಡು ಓಡಾಟ ಕಲ್ಪಿಸುವ ಭರವಸೆಯನ್ನು ರೈಲ್ವೇ ಇಲಾಖೆ ನೀಡಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm