ಬ್ರೇಕಿಂಗ್ ನ್ಯೂಸ್
26-10-21 01:06 pm Headline Karnataka News Network ದೇಶ - ವಿದೇಶ
ಲಾಗೋಸ್, ಅ 26: ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿದ್ದು, 18 ಮಂದಿ ಮೃತಪಟ್ಟಿದ್ದಾರೆ.
ಮುಂಜಾನೆ ಪ್ರಾರ್ಥನಾ ಸಮಯದಲ್ಲಿ ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ದಾಳಿ ನಡೆಸಿರುವ ಬಂದೂಕುಧಾರಿಗಳು ರಕ್ತಪಾತ ನಡೆಸಿದ್ದಾರೆ.
ಇತ್ತೀಚೆಗೆ ನೈಜೀರಿಯಾದ ವಾಯುವ್ಯ ರಾಜ್ಯಗಳಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ರಾಜಧಾನಿಯಿಂದ ಸುಮಾರು 270 ಕಿಲೋ ಮೀಟರ್ ದೂರದಲ್ಲಿರುವ ಮಜಕುಕಾ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆ ಕಡಿಮೆಯಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ತಲುಪಲು ಉತ್ತಮವಾದ ರಸ್ತೆ ಮಾರ್ಗವೂ ಇಲ್ಲ. ಈ ಹಿನ್ನೆಲೆ ಸಂಚು ರೂಪಿಸಿ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕಳೆದ ವಾರವಷ್ಟೇ ವಾಯುವ್ಯ ಸುಕೊಟೊ ರಾಜ್ಯದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿ, ಕನಿಷ್ಠ 40 ಕ್ಕೂ ಹೆಚ್ಚು ಜನರನ್ನು ಕೊಂದಿದ್ದರು. ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದಿರುವ ಪ್ರದೇಶಗಳೇ ದಾಳಿಕೋರರಿಗೆ ಅಡಗುತಾಣಗಳಾಗಿವೆ ಎಂದು ಹೇಳಲಾಗುತ್ತಿದೆ.
ಕಳೆದ ಒಂದು ವಾರದ ಹಿಂದಷ್ಟೇ ಬೈಕ್ಗಳಲ್ಲಿ ಬಂದ ಬಂಡುಕೋರರು ಗುಂಡು ಹಾರಿಸಿ ಸುಮಾರು 43 ಮಂದಿಯನ್ನು ಕೊಂದಿರುವ ಘಟನೆ ನೈಜೀರಿಯಾದ ವಾಯವ್ಯ ರಾಜ್ಯವಾದ ಸೊಕೊಟೊದಲ್ಲಿ ನಡೆದಿತ್ತು.

ಗೊರೊನ್ವೋ ಗ್ರಾಮದಲ್ಲಿ ಭಾನುವಾರ ಬಂಡುಕೋರರು ನಡೆಸಿದ ದಾಳಿಯಲ್ಲಿ ಸುಮಾರು 43 ಮಂದಿ ಮೃತಪಟ್ಟಿರುವುದು ದೃಢವಾಗಿದೆ ಎಂದು ಸೊಕೊಟೊ ಸರ್ಕಾರದ ವಕ್ತಾರ ಮೊಹಮ್ಮದ್ ಬೆಲ್ಲೋ ಹೇಳಿದ್ದಾರೆ ಎಂದು ಏಜೆನ್ಸ್ ಫ್ರಾನ್ಸ್ ಪ್ರೆಸ್ಸೆ ವರದಿ ಮಾಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ಉಲ್ಲೇಖಿಸಿದೆ.
ಸೋಮವಾರ ಬೆಳಗ್ಗೆ ಈ ಬಗ್ಗೆ ವರದಿ ಮಾಡಿರುವ ಸ್ಥಳೀಯ ಪತ್ರಿಕೆ ಪ್ರೀಮಿಯಮ್ ಟೈಮ್ಸ್, ಗ್ರಾಮದಲ್ಲಿ ಮಾರುಕಟ್ಟೆ ನಡೆಯುತ್ತಿದ್ದ ವೇಳೆ ದಾಳಿ ನಡೆದಿದ್ದು, 30 ಮಂದಿ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ಗುಂಪು ಬೈಕ್ಗಳಲ್ಲಿ ಬಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದೆ.
ಇದಕ್ಕೂ ಮೊದಲು ಬೇರೊಂದು ಗ್ರಾಮದ ಮಾರುಕಟ್ಟೆಯ ಮೇಲೆ ದಾಳಿ ನಡೆಸಿದ್ದ ಬಂಡುಕೋರರು, 19 ಮಂದಿಯನ್ನು ಕೊಂದಿದ್ದರು. ಸುಮಾರು ವರ್ಷಗಳಲ್ಲಿ ಈ ರಾಷ್ಟ್ರದಲ್ಲಿ ಹಿಂಸಾಚಾರಗಳು ನಡೆಯುತ್ತಿದ್ದು, ಬೋಕೋ ಹರಾಮ್ ಮುಂತಾದ ಬಂಡುಕೋರರು ಇಲ್ಲಿ ಆಗಾಗ ದಾಳಿ ನಡೆಸುತ್ತಿರುತ್ತವೆ.
At least 18 worshippers were killed by gunmen who attacked a mosque in northern Nigeria during early morning prayers Monday
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm