ಬ್ರೇಕಿಂಗ್ ನ್ಯೂಸ್
26-10-21 01:06 pm Headline Karnataka News Network ದೇಶ - ವಿದೇಶ
ಲಾಗೋಸ್, ಅ 26: ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿದ್ದು, 18 ಮಂದಿ ಮೃತಪಟ್ಟಿದ್ದಾರೆ.
ಮುಂಜಾನೆ ಪ್ರಾರ್ಥನಾ ಸಮಯದಲ್ಲಿ ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ದಾಳಿ ನಡೆಸಿರುವ ಬಂದೂಕುಧಾರಿಗಳು ರಕ್ತಪಾತ ನಡೆಸಿದ್ದಾರೆ.
ಇತ್ತೀಚೆಗೆ ನೈಜೀರಿಯಾದ ವಾಯುವ್ಯ ರಾಜ್ಯಗಳಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ರಾಜಧಾನಿಯಿಂದ ಸುಮಾರು 270 ಕಿಲೋ ಮೀಟರ್ ದೂರದಲ್ಲಿರುವ ಮಜಕುಕಾ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆ ಕಡಿಮೆಯಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ತಲುಪಲು ಉತ್ತಮವಾದ ರಸ್ತೆ ಮಾರ್ಗವೂ ಇಲ್ಲ. ಈ ಹಿನ್ನೆಲೆ ಸಂಚು ರೂಪಿಸಿ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕಳೆದ ವಾರವಷ್ಟೇ ವಾಯುವ್ಯ ಸುಕೊಟೊ ರಾಜ್ಯದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿ, ಕನಿಷ್ಠ 40 ಕ್ಕೂ ಹೆಚ್ಚು ಜನರನ್ನು ಕೊಂದಿದ್ದರು. ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದಿರುವ ಪ್ರದೇಶಗಳೇ ದಾಳಿಕೋರರಿಗೆ ಅಡಗುತಾಣಗಳಾಗಿವೆ ಎಂದು ಹೇಳಲಾಗುತ್ತಿದೆ.
ಕಳೆದ ಒಂದು ವಾರದ ಹಿಂದಷ್ಟೇ ಬೈಕ್ಗಳಲ್ಲಿ ಬಂದ ಬಂಡುಕೋರರು ಗುಂಡು ಹಾರಿಸಿ ಸುಮಾರು 43 ಮಂದಿಯನ್ನು ಕೊಂದಿರುವ ಘಟನೆ ನೈಜೀರಿಯಾದ ವಾಯವ್ಯ ರಾಜ್ಯವಾದ ಸೊಕೊಟೊದಲ್ಲಿ ನಡೆದಿತ್ತು.
ಗೊರೊನ್ವೋ ಗ್ರಾಮದಲ್ಲಿ ಭಾನುವಾರ ಬಂಡುಕೋರರು ನಡೆಸಿದ ದಾಳಿಯಲ್ಲಿ ಸುಮಾರು 43 ಮಂದಿ ಮೃತಪಟ್ಟಿರುವುದು ದೃಢವಾಗಿದೆ ಎಂದು ಸೊಕೊಟೊ ಸರ್ಕಾರದ ವಕ್ತಾರ ಮೊಹಮ್ಮದ್ ಬೆಲ್ಲೋ ಹೇಳಿದ್ದಾರೆ ಎಂದು ಏಜೆನ್ಸ್ ಫ್ರಾನ್ಸ್ ಪ್ರೆಸ್ಸೆ ವರದಿ ಮಾಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ಉಲ್ಲೇಖಿಸಿದೆ.
ಸೋಮವಾರ ಬೆಳಗ್ಗೆ ಈ ಬಗ್ಗೆ ವರದಿ ಮಾಡಿರುವ ಸ್ಥಳೀಯ ಪತ್ರಿಕೆ ಪ್ರೀಮಿಯಮ್ ಟೈಮ್ಸ್, ಗ್ರಾಮದಲ್ಲಿ ಮಾರುಕಟ್ಟೆ ನಡೆಯುತ್ತಿದ್ದ ವೇಳೆ ದಾಳಿ ನಡೆದಿದ್ದು, 30 ಮಂದಿ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ಗುಂಪು ಬೈಕ್ಗಳಲ್ಲಿ ಬಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದೆ.
ಇದಕ್ಕೂ ಮೊದಲು ಬೇರೊಂದು ಗ್ರಾಮದ ಮಾರುಕಟ್ಟೆಯ ಮೇಲೆ ದಾಳಿ ನಡೆಸಿದ್ದ ಬಂಡುಕೋರರು, 19 ಮಂದಿಯನ್ನು ಕೊಂದಿದ್ದರು. ಸುಮಾರು ವರ್ಷಗಳಲ್ಲಿ ಈ ರಾಷ್ಟ್ರದಲ್ಲಿ ಹಿಂಸಾಚಾರಗಳು ನಡೆಯುತ್ತಿದ್ದು, ಬೋಕೋ ಹರಾಮ್ ಮುಂತಾದ ಬಂಡುಕೋರರು ಇಲ್ಲಿ ಆಗಾಗ ದಾಳಿ ನಡೆಸುತ್ತಿರುತ್ತವೆ.
At least 18 worshippers were killed by gunmen who attacked a mosque in northern Nigeria during early morning prayers Monday
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm