ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
19-09-24 10:42 pm
Bangalore Correspondent
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm