ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 02:39 pm
HK News Staffer
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm