ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm