ಬ್ರೇಕಿಂಗ್ ನ್ಯೂಸ್
29-10-21 04:55 pm Headline Karnataka News Network ದೇಶ - ವಿದೇಶ
ಪಣಜಿ, ಅ.29: ಖ್ಯಾತ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಟಿಎಂಸಿ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಗೋವಾದಲ್ಲಿ ಚುನಾವಣೆಗೆ ಸಿದ್ಧವಾಗುತ್ತಿದ್ದು, ಲಿಯಾಂಡರ್ ಪೇಸ್, ನಟಿ ನಫೀಸಾ ಆಲಿ ಸೇರಿದಂತೆ ಹಲವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಲಿಯಾಂಡರ್ ಪೇಸ್ ಪಕ್ಷ ಸೇರ್ಪಡೆಯಾಗುತ್ತಿರುವುದನ್ನು ಹೇಳಲು ಸಂತಸ ಪಡುತ್ತೇನೆ. ಲಿಯಾಂಡರ್ ನನ್ನ ಕಿರಿಯ ಸೋದರನಾಗಿದ್ದು ನಾನು ಯೂತ್ ಮಿನಿಸ್ಟರ್ ಆಗಿದ್ದಾಗಿನಿಂದಲೂ ಆತನ ಪರಿಚಯದಲ್ಲಿದ್ದೇನೆ. ಆಗ ಆತ ಸಣ್ಣ ಯುವಕನಾಗಿದ್ದ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿ ಪ್ರಾಬಲ್ಯದ ಗೋವಾದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಕೇಸರಿ ಪಕ್ಷವನ್ನು ಎದುರಿಸಲು ಟಿಎಂಸಿ ಸಿದ್ಧತೆ ನಡೆಸಿದೆ. ಚುನಾವಣೆಗೆ ಪ್ರಚಾರ ಮತ್ತು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮೂರು ದಿನಗಳ ಪ್ರವಾಸಕ್ಕಾಗಿ ಮಮತಾ ಬ್ಯಾನರ್ಜಿ ಗುರುವಾರ ಗೋವಾಕ್ಕೆ ಆಗಮಿಸಿದ್ದಾರೆ. ಮಮತಾ ಗೋವಾಕ್ಕೆ ಬರುತ್ತಲೇ ಬಿಜೆಪಿ, ಹಿಂದು ವಿರೋಧಿ ಎಂದು ಟೀಕಿಸಿದೆ.
ಪ್ರತಿಯಾಗಿ ಟಿಎಂಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ, ಬಿಜೆಪಿಯವರು ತನ್ನ ಮೇಲೆ ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ನಮ್ಮ ಪಾರ್ಟಿಯ ಟಿಎಂಸಿ ಹೆಸರಲ್ಲಿ ಟೆಂಪಲ್, ಮೋಸ್ಕ್ಯು, ಚರ್ಚ್ ಇದೆ ಎಂದು ಕೌಂಟರ್ ಕೊಟ್ಟಿದ್ದಾರೆ. ನಾವು ಗೋವಾದಲ್ಲಿ ಜನರನ್ನು ಮತದ ಆಧಾರದಲ್ಲಿ ವಿಭಜಿಸಲು ಬಯಸಲ್ಲ. ಸದೃಢ ಮತ್ತು ಸ್ವಾವಲಂಬಿ ಗೋವಾಕ್ಕಾಗಿ ನಾವು ಮತ ಕೇಳುತ್ತೇವೆ ಎಂದಿದ್ದಾರೆ.
2022ರ ಆರಂಭದಲ್ಲಿ ಗೋವಾದಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಎಲ್ಲ 40 ಕ್ಷೇತ್ರಗಳಿಗೂ ಟಿಎಂಸಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಇದಕ್ಕಾಗಿ ಆಯಾ ಭಾಗದಲ್ಲಿ ಇತರ ಪಕ್ಷದ ನಾಯಕರನ್ನು ಮಮತಾ ಸೆಳೆಯುತ್ತಿದ್ದು, ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.
West Bengal chief minister and Trinamool Congress (TMC) supremo Mamata Banerjee will begin her three-day visit to Goa from Thursday, months ahead of the assembly elections in the state.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm