ಬ್ರೇಕಿಂಗ್ ನ್ಯೂಸ್
30-10-21 02:21 pm Headline Karnataka News Network ದೇಶ - ವಿದೇಶ
ಮುಂಬೈ, ಅ.30: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಾರುಖ್ ಖಾನ್ ಪುತ್ರ ಆರ್ಯನ್, ಮೂರು ವಾರಗಳ ಬಳಿಕ ಅಂತೂ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಇಂದು ಬೆಳಗ್ಗೆ 11 ಗಂಟೆಗೆ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗುತ್ತಲೇ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಆರ್ಯನ್ ಪರವಾಗಿ ಘೋಷಣೆ ಕೂಗುತ್ತಾ ಹೀರೋ ರೀತಿಯಲ್ಲಿ ಸ್ವಾಗತಿಸಿದ್ದಾರೆ.

ಆರ್ಯನ್ ಖಾನ್ ಬಾಂದ್ರಾದಲ್ಲಿರುವ ಮನೆಗೆ ಆಗಮಿಸುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಹರ್ಷಾಚರಣೆ ನಡೆಸಿದ್ದಾರೆ. ಸಾಗರ ತೀರದಲ್ಲಿರುವ ಮನೆಯ ಮುಂಭಾಗದಲ್ಲಿ ಜನರು ಸೇರಿದ್ದು, ಕುಣಿದು ಕುಪ್ಪಳಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆದರೆ, ಜಾಮೀನು ನೀಡಿರುವ ಕೋರ್ಟ್ ಆರ್ಯನ್ ಖಾನ್ ಹರ್ಷಾಚರಣೆಗೆ ಬ್ರೇಕ್ ನೀಡಿದೆ. ಒಬ್ಬಂಟಿಯಾಗಿ ಹೊರಗಡೆ ಅಡ್ಡಾಡುವುದಕ್ಕೂ ಕೋರ್ಟ್ ಷರತ್ತುಗಳನ್ನು ವಿಧಿಸಿದೆ. ಜೈಲಿನಿಂದ ಬಿಡುಗಡೆ ಆಗೋದಕ್ಕೂ ಮುನ್ನ ಪಾಸ್ಪೋರ್ಟ್ ಅನ್ನು ಎನ್ ಡಿಪಿಎಸ್ ಸ್ಪೆಷಲ್ ಕೋರ್ಟಿಗೆ ಒಪ್ಪಿಸುವುದಕ್ಕೆ ಆದೇಶ ಮಾಡಲಾಗಿತ್ತು. ಅಲ್ಲದೆ, ಕೋರ್ಟ್ ಪರ್ಮಿಷನ್ ಇಲ್ಲದೆ ಭಾರತ ಬಿಟ್ಟು ಹೋಗುವಂತಿಲ್ಲ. ಮುಂಬೈ ಬಿಟ್ಟು ಹೊರಗೆ ತೆರಳುವುದಕ್ಕೂ ಎನ್ ಸಿಬಿ ಅಧಿಕಾರಿಗಳಿಗೆ ಮೊದಲೇ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದರೆ ಜಾಮೀನು ರದ್ದುಗೊಳಿಸಲು ಅವಕಾಶ ಇರುತ್ತದೆ.

ಇದಲ್ಲದೆ, ಆರೋಪಿ ಆರ್ಯನ್ ಖಾನ್ ಸೇರಿದಂತೆ ಯಾರು ಕೂಡ ಸಾಕ್ಷಿಗಳನ್ನು ಬೆದರಿಸುವುದಾಗಲೀ, ಅವರಿಗೆ ಆಮಿಷ ನೀಡುವುದಾಗಲೀ ಮಾಡುವಂತಿಲ್ಲ. ಎನ್ ಡಿಪಿಎಸ್ ಕಾಯ್ದೆಯಡಿ ಒಳಗೊಳ್ಳುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಇದರ ಜೊತೆಗೆ, ಪ್ರಕರಣದ ಇತರ ಆರೋಪಿಗಳ ಜೊತೆ ಮಾತನಾಡುವುದು ಅಥವಾ ಪ್ರಕರಣದ ಬಗ್ಗೆ ಚರ್ಚೆ ನಡೆಸುವುದು, ಇದೇ ರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮಾಡುವಂತಿಲ್ಲ. ಆರ್ಯನ್ ಖಾನ್ ಜೊತೆಗೆ, ಅರ್ಬಾಜ್ ಖಾನ್ ಮತ್ತು ಮುನ್ ಮುನ್ ಧಮೇಚಾ ಕೂಡ ಇದೇ ಸಂದರ್ಭದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Aryan Khan, the son of superstar Shah Rukh Khan, today left a Mumbai jail after nearly four weeks. The 23-year-old was granted bail on Thursday by the Bombay High Court in the drugs-on-cruise case but spent two additional nights in jail as his bail papers missed the 5:30 pm deadline on Friday after an anxious wait that went down to seconds.
25-02-26 01:48 pm
Supritha Jain | ಸುಪ್ರೀತಾ ಜೈನ್
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm