ಬ್ರೇಕಿಂಗ್ ನ್ಯೂಸ್
01-11-21 07:34 pm Headline Karnataka News Desk ದೇಶ - ವಿದೇಶ
ಲಕ್ನೋ, ನ.1: ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.
ಸದ್ಯ ಆಜಂಪುರ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಅಖಿಲೇಶ್ ಯಾದವ್, ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯೂ ಆಗಿದ್ದರು. ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿಯಿಂದ ಅಖಿಲೇಶ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದ್ದರೂ, ಅವರು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಿಎಂ ಅಭ್ಯರ್ಥಿಯಾಗಿ ಬೇರೆ ಯಾರನ್ನಾದರೂ ಬಿಂಬಿಸುತ್ತಾರೆಯೇ ಎಂಬ ಬಗ್ಗೆ ಕುತೂಹಲ ಎದ್ದಿದೆ.
ಬಿಜೆಪಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಚುನಾವಣಾ ಪ್ರಚಾರದಲ್ಲಿರುವ ಅಖಿಲೇಶ್ ಯಾದವ್ ಚುನಾವಣೆಗೆ ಮೊದಲೇ ಸ್ಥಳೀಯ ಪಕ್ಷಗಳ ಜೊತೆ ಮೈತ್ರಿ ಸಾಧಿಸುವ ಯತ್ನದಲ್ಲಿದ್ದಾರೆ. ಆರ್ ಎಲ್ ಡಿ ಜೊತೆಗೆ ಈಗಾಗಲೇ ಮಾತುಕತೆ ನಡೆದಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಇದಲ್ಲದೆ, ಸಚ್ ದೇವ್ ಭಾರತೀಯ ಸಮಾಜಪಾರ್ಟಿ ಮತ್ತು ಶಿವಪಾಲ್ ಸಿಂಗ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಾರ್ಟಿ ಲೋಹಿಯಾ ಜೊತೆಗೂ ಮೈತ್ರಿಗೆ ಸಿದ್ಧತೆ ನಡೆದಿದೆ.
ವಾರದ ಹಿಂದಷ್ಟೇ ಬಿಜೆಪಿಯ ಒಬ್ಬ ಶಾಸಕ ಮತ್ತು ಆರು ಮಂದಿ ಬಿಎಸ್ಪಿ ಶಾಸಕರು ಸಮಾಜವಾದಿ ಪಾರ್ಟಿಗೆ ಸೇರ್ಪೆಡೆಯಾಗಿದ್ದರು. ಈ ವೇಳೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್, ಭಾಜಪಾ ಪರಿವಾರ್ ಮುಂದಿನ ದಿನಗಳಲ್ಲಿ ಭಾಗ್ ತಾ ಪರಿವಾರ್ (ಕುಟುಂಬ ಬಿಟ್ಟು ಓಡುವ) ಆಗಲಿದೆ ಎಂದು ಟೀಕಿಸಿದ್ದರು.
2022ರಲ್ಲಿ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದ್ದು ಬಿಜೆಪಿಯಿಂದ ಈಗಾಗಲೇ ಸಿದ್ಧತೆ ನಡೆದಿದೆ. ಎರಡು ದಿನಗಳ ಹಿಂದೆ ಲಕ್ನೋಗೆ ಬಂದಿದ್ದ ಅಮಿತ್ ಷಾ, ಮುಂದಿನ ಚುನಾವಣೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದಲ್ಲೇ ಎದುರಿಸಲಿದ್ದೇವೆ ಎಂದು ಹೇಳಿದ್ದರು.
Samajwadi Party chief Akhilesh Yadav has said he will not contest the Uttar Pradesh election next year, but his party insists a decision will be taken collectively and there is none yet. Akhilesh Yadav was quoted by Press Trust of India as saying: "I will not be contesting the assembly election myself".
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm