ಬ್ರೇಕಿಂಗ್ ನ್ಯೂಸ್
03-11-21 10:28 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.3: ದೇಶಾದ್ಯಂತ ನಡೆದ ಉಪ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆ ಆದ ಬೆನ್ನಲ್ಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಇಳಿಸಿದ್ದು ದೀಪಾವಳಿ ಕೊಡುಗೆ ನೆಪದಲ್ಲಿ ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
ಪೆಟ್ರೋಲ್ ಮೇಲಿನ ಸುಂಕದಲ್ಲಿ ಐದು ರೂ. ಇಳಿಸಿದ್ದರೆ, ಡೀಸೆಲ್ ತೆರಿಗೆಯಲ್ಲಿ ಹತ್ತು ರೂ. ಇಳಿಕೆ ಮಾಡಿದೆ. ಕೇಂದ್ರ ಸರಕಾರದ ಸುಂಕದಲ್ಲಿ ಇಳಿಕೆಯಾಗಿದ್ದರಿಂದ ಅದಕ್ಕೆ ಅನುಸರಿಸಿ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ ದರದಲ್ಲಿಯೂ ಅಷ್ಟೇ ಇಳಿಕೆಯಾಗಲಿದೆ. ಕಡಿಮೆಯಾದ ದರ ನ.4 ರಿಂದ ದೇಶಾದ್ಯಂತ ಜಾರಿಗೆ ಬರಲಿದೆ.
ಕಳೆದ ಎರಡು ತಿಂಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಏರಿಕೆಯಾದ ನೆಪದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರೀ ಏರಿಕೆಯಾಗಿತ್ತು. ಕರ್ನಾಟಕದಲ್ಲಿ ಪೆಟ್ರೋಲಿಗೆ 112 ರೂ. ಆಗಿದ್ದರೆ, ಡೀಸೆಲಿಗೆ 105 ರೂ. ಆಗಿತ್ತು. ಈ ಪೈಕಿ 60 ಶೇ. ಭಾಗ ಕೇಂದ್ರ ಮತ್ತು ರಾಜ್ಯ ಸರಕಾರದ ತೆರಿಗೆಯೇ ಇದ್ದರೂ, ಅದನ್ನು ಇಳಿಸಬೇಕೆಂದು ದೇಶಾದ್ಯಂತ ಒತ್ತಾಯ ಕೇಳಿಬಂದಿದ್ದರೂ ಸರಕಾರ ಕಿವಿಕೊಟ್ಟಿರಲಿಲ್ಲ. ಇದೀಗ ದೇಶದ ವಿವಿಧ ರಾಜ್ಯಗಳಲ್ಲಿ ಉಪ ಚುನಾವಣೆ ನಡೆದಿದ್ದು ಬಿಜೆಪಿಗೆ ಬಹುತೇಕ ಕಡೆ ಹಿನ್ನಡೆಯಾಗಿದೆ. ಬಿಜೆಪಿ ಹೊಂದಿದ್ದ ಸಂಸದ ಕ್ಷೇತ್ರವೂ ಕಾಂಗ್ರೆಸ್ ಪಾಲಾಗಿತ್ತು. ಹಿಮಾಚಲ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರಕಾರ ಜನರ ಮೇಲಿನ ತೆರಿಗೆ ಹೊರೆಯನ್ನು ತಗ್ಗಿಸಿದೆ.
ಇದೇ ವೇಳೆ, ಆಯಾ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ಇಳಿಸುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ಇದರಿಂದ ಆರ್ಥಿಕ ಸಂಕಷ್ಟಕ್ಕೊಳಗಾದ ಜನರಿಗೆ ಸ್ವಲ್ಪ ಮಟ್ಟಿಗೆ ಆಸರೆ ಆಗಲಿದೆ ಎಂದು ಕೇಂದ್ರ ಸರಕಾರ ಉಚಿತ ಸಲಹೆಯನ್ನೂ ನೀಡಿದೆ.
In a move to provide a fillip to the economy, the Central government has taken a decision to make significant cuts in excise duty on petrol and diesel starting tomorrow. On the eve of Diwali, the government decided to reduce the central excise duty of ₹5 on petrol and ₹10 on diesel, according to people familiar with the matter. The prices of fuel and diesel will come down accordingly across the country.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm