ಬ್ರೇಕಿಂಗ್ ನ್ಯೂಸ್
12-09-20 02:43 pm Headline Karnataka News Network ದೇಶ - ವಿದೇಶ
ಮಂಡ್ಯ, ಸೆಪ್ಟೆಂಬರ್ 12: ಡ್ರಗ್ಸ್ ದಂಧೆಯಲ್ಲಿ ಜಮೀರ್ 100% ಇದ್ದಾರೆ, ಅದರಲ್ಲಿ ಸಂಶಯವಿಲ್ಲ. ರಾಜಕಾರಣದಲ್ಲಿ ಇಂಟರ್ನಲ್ ವ್ಯವಹಾರ ಇಟ್ಟುಕೊಂಡಿರೋದರಿಂದ ಜಮೀರನನ್ನು ಅರೆಸ್ಟ್ ಮಾಡ್ತಿಲ್ಲ. ಹೀಗೆಂದು ಸರಕಾರವನ್ನು ಜರೆದವರು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್.
ಮಂಡ್ಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಈ ಡ್ರಗ್ಸ್ ದಂಧೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳವರೂ ಇದ್ದಾರೆ. ಇವ್ರೀಗ ಧಮ್ ತೋರಿಸಬೇಕು. ಜಮೀರ ಆಗಿರಲಿ, ಯಾರೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಟಿ ಸಂಜನಾ ಜೊತೆಗೆ ಆಕೆಯ ಗಂಡ ಅಜೀದ್ ಕೂಡ ಡ್ರಗ್ ದಂಧೆಯಲ್ಲಿ ಇದ್ದಾನೆ. ಇನ್ನು ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ಇವೆರಡಕ್ಕೂ ನೇರ ಕನೆಕ್ಟ್ ಇದೆ. ಇವೆಲ್ಲ ಪಾತಕಗಳಿಗೆ ಪಾಕಿಸ್ತಾನದಲ್ಲಿ ಕುಳಿತ ದಾವೂದ್ ಇಬ್ರಾಹಿಮನೇ ಮೂಲ ಪುರುಷ. ಹಿಂದೆ ಅಜೀಮ್ ಅಸ್ತಾನ ಎಂಬ ದೇಶದ್ರೋಹಿ ಇದ್ದ. ಇವರೆಲ್ಲರೂ ಇಡೀ ಚಿತ್ರರಂಗವನ್ನು ಆವರಿಸಿದ್ದಾರೆ. ಬಾಲಿವುಡ್ ಸೇರಿ ಎಲ್ಲ ಕಡೆಯೂ ಇವರ ಕಬಂಧ ಬಾಹು ಇದೆ ಎಂದಿದ್ದಾರೆ ಮುತಾಲಿಕ್.

ಈ ಜಮೀರ ತನ್ನ ಚುನಾವಣಾ ಪ್ರಚಾರಕ್ಕೆ ಮುಂಬೈನಿಂದ ಚಿತ್ರ ನಟ- ನಟಿಯರನ್ನು ಕರೆಸುತ್ತಾರೆ. ಏನ್ ಸುಮ್ನೆ ಬರ್ತಾರಾ ಅವ್ರೆಲ್ಲ.. ವ್ಯವಸ್ಥಿತ ಜಾಲದಲ್ಲಿ ಜಮೀರ್ ಇರೋದು ನಿಶ್ಚಿತವಾಗಿದೆ. ಈಗ ಬಿಜೆಪಿ ಸರಕಾರ ಧಮ್ ತೋರಿಸಬೇಕು. ಜಮೀರ್ ನನ್ನು ಒದ್ದು ಒಳಗೆ ಹಾಕಬೇಕು, ಪಾದರಾಯನಪುರ, ಡಿಜೆ ಹಳ್ಳಿ ಗಲಾಟೆಗೂ ಡ್ರಗ್ಸ್ ಕಾರಣ ಆಗಿತ್ತು. ಆಗೆಲ್ಲ ಜಮೀರ್ ಹೆಸರು ಕೂಡ ಕೇಳಿಬಂದಿತ್ತು. ಈಗ ಅವಕಾಶ ಬಂದಿದೆ, ಈತನನ್ನು ಜೈಲಿಗೆ ತಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ವಹಿಸಬಾರದು. ಸಿಬಿಐ ಬಗ್ಗೆ ವಿಶ್ವಾಸವಿಲ್ಲ. ಎಲ್ಲ ಸೇರಿ ಮುಚ್ಚಿ ಹಾಕುತ್ತಾರೆ ಎಂದು ಹೇಳಿದರು.
Join our WhatsApp group for latest news updates
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm