ಬ್ರೇಕಿಂಗ್ ನ್ಯೂಸ್
12-09-20 02:43 pm Headline Karnataka News Network ದೇಶ - ವಿದೇಶ
ಮಂಡ್ಯ, ಸೆಪ್ಟೆಂಬರ್ 12: ಡ್ರಗ್ಸ್ ದಂಧೆಯಲ್ಲಿ ಜಮೀರ್ 100% ಇದ್ದಾರೆ, ಅದರಲ್ಲಿ ಸಂಶಯವಿಲ್ಲ. ರಾಜಕಾರಣದಲ್ಲಿ ಇಂಟರ್ನಲ್ ವ್ಯವಹಾರ ಇಟ್ಟುಕೊಂಡಿರೋದರಿಂದ ಜಮೀರನನ್ನು ಅರೆಸ್ಟ್ ಮಾಡ್ತಿಲ್ಲ. ಹೀಗೆಂದು ಸರಕಾರವನ್ನು ಜರೆದವರು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್.
ಮಂಡ್ಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಈ ಡ್ರಗ್ಸ್ ದಂಧೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳವರೂ ಇದ್ದಾರೆ. ಇವ್ರೀಗ ಧಮ್ ತೋರಿಸಬೇಕು. ಜಮೀರ ಆಗಿರಲಿ, ಯಾರೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಟಿ ಸಂಜನಾ ಜೊತೆಗೆ ಆಕೆಯ ಗಂಡ ಅಜೀದ್ ಕೂಡ ಡ್ರಗ್ ದಂಧೆಯಲ್ಲಿ ಇದ್ದಾನೆ. ಇನ್ನು ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ಇವೆರಡಕ್ಕೂ ನೇರ ಕನೆಕ್ಟ್ ಇದೆ. ಇವೆಲ್ಲ ಪಾತಕಗಳಿಗೆ ಪಾಕಿಸ್ತಾನದಲ್ಲಿ ಕುಳಿತ ದಾವೂದ್ ಇಬ್ರಾಹಿಮನೇ ಮೂಲ ಪುರುಷ. ಹಿಂದೆ ಅಜೀಮ್ ಅಸ್ತಾನ ಎಂಬ ದೇಶದ್ರೋಹಿ ಇದ್ದ. ಇವರೆಲ್ಲರೂ ಇಡೀ ಚಿತ್ರರಂಗವನ್ನು ಆವರಿಸಿದ್ದಾರೆ. ಬಾಲಿವುಡ್ ಸೇರಿ ಎಲ್ಲ ಕಡೆಯೂ ಇವರ ಕಬಂಧ ಬಾಹು ಇದೆ ಎಂದಿದ್ದಾರೆ ಮುತಾಲಿಕ್.

ಈ ಜಮೀರ ತನ್ನ ಚುನಾವಣಾ ಪ್ರಚಾರಕ್ಕೆ ಮುಂಬೈನಿಂದ ಚಿತ್ರ ನಟ- ನಟಿಯರನ್ನು ಕರೆಸುತ್ತಾರೆ. ಏನ್ ಸುಮ್ನೆ ಬರ್ತಾರಾ ಅವ್ರೆಲ್ಲ.. ವ್ಯವಸ್ಥಿತ ಜಾಲದಲ್ಲಿ ಜಮೀರ್ ಇರೋದು ನಿಶ್ಚಿತವಾಗಿದೆ. ಈಗ ಬಿಜೆಪಿ ಸರಕಾರ ಧಮ್ ತೋರಿಸಬೇಕು. ಜಮೀರ್ ನನ್ನು ಒದ್ದು ಒಳಗೆ ಹಾಕಬೇಕು, ಪಾದರಾಯನಪುರ, ಡಿಜೆ ಹಳ್ಳಿ ಗಲಾಟೆಗೂ ಡ್ರಗ್ಸ್ ಕಾರಣ ಆಗಿತ್ತು. ಆಗೆಲ್ಲ ಜಮೀರ್ ಹೆಸರು ಕೂಡ ಕೇಳಿಬಂದಿತ್ತು. ಈಗ ಅವಕಾಶ ಬಂದಿದೆ, ಈತನನ್ನು ಜೈಲಿಗೆ ತಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ವಹಿಸಬಾರದು. ಸಿಬಿಐ ಬಗ್ಗೆ ವಿಶ್ವಾಸವಿಲ್ಲ. ಎಲ್ಲ ಸೇರಿ ಮುಚ್ಚಿ ಹಾಕುತ್ತಾರೆ ಎಂದು ಹೇಳಿದರು.
Join our WhatsApp group for latest news updates
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm