ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm