ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm