ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm