ಬ್ರೇಕಿಂಗ್ ನ್ಯೂಸ್
11-11-21 06:34 pm HK News Desk ದೇಶ - ವಿದೇಶ
ಮುಂಬೈ: ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ವ್ಯಕ್ತಿಯೋರ್ವ ನ್ಯಾಯಾಲಯದ ಒಳಗೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ಕಡೆಗೆ ಚಪ್ಪಲಿ ಎಸೆದಿದ್ದಾನೆ. ಈ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಕೋರ್ಟ್ನಲ್ಲಿ ನಡೆದಿದೆ.
ರೋಷನ್ ಘೋರ್ಪಡೆ ಎಂಬಾತ ಇಂಥ ಕೃತ್ಯ ಎಸಗಿದವನು. ಈತ ತನ್ನ ಪತ್ನಿ ಹಾಗೂ ತಾಯಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಈತನ ವಿಚಾರಣೆ ಅನೇಕ ವರ್ಷಗಳಿಂದ ನಡೆಯುತ್ತಿದೆ. ಆದರೆ ವಿಚಾರಣೆ ದಿನಗಳಲ್ಲಿ ಪೊಲೀಸರಿಗೆ ಎಷ್ಟೇ ಬೇಡಿಕೊಂಡರೂ ಅವರು ಈತನನ್ನು ಕೋರ್ಟ್ಗೆ ಕರೆದುಕೊಂಡು ಹೋಗುತ್ತಿರಲಿಲ್ಲ. ಪ್ರತಿಬಾರಿಯೂ ತನ್ನನ್ನು ಕೋರ್ಟ್ಗೆ ಕರೆದುಕೊಂಡು ಹೋಗಿ ಎನ್ನುತ್ತಿದ್ದ. ಆದರೆ ಪೊಲೀಸರು ಕೋರ್ಟ್ ಆದೇಶವಿದ್ದರಷ್ಟೇ ಕರೆದುಕೊಂಡು ಹೋಗುವುದಾಗಿ ಹೇಳಿದ್ದರು.
ಇದರಿಂದ ರೋಷನ್ ನ್ಯಾಯಾಧೀಶರ ವಿರುದ್ಧ ಸಿಟ್ಟಿಗೆದ್ದಿದ್ದ. ನಿನ್ನೆ ವಿಚಾರಣೆಗೆ ಕರೆದುಕೊಂಡು ಹೋದಾಗ ನ್ಯಾಯಾಧೀಶರ ಕಡೆಗೆ ಚಪ್ಪಲಿ ಎಸೆದಿದ್ದಾನೆ. ತಕ್ಷಣ ನ್ಯಾಯಾಧೀಶರು ಕೆಳಗೆ ಬಗ್ಗಿ ತಪ್ಪಿಸಿಕೊಂಡಿದ್ದಾರೆ.
ಈಗ ಕೊಲೆ ಕೇಸಿನ ಜತೆಗೆ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವಕ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ಅಡ್ಡಿಪಡಿಸಲು ಯತ್ನ), 504ರ (ಶಾಂತಿಯನ್ನು ಭಂಗಗೊಳಿಸಿ ಉದ್ದೇಶಪೂರ್ವಕ ಅವಮಾನ)ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A man accused in a murder case hurled a slipper at a judge in a local court in Maharashtra's Thane district as he was angry that he was not being brought to the court on the dates of his hearing, police said today. The incident took place at the court in Kalyan, where undertrial Roshan Ghorpade was being tried for the murder of his wife and mother, a police officer said. During the hearing, Ghorpade picked up a slipper and hurled it at the judge. However, the footwear did not hit the judge as he ducked, the official said.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm