ಬ್ರೇಕಿಂಗ್ ನ್ಯೂಸ್
14-11-21 01:39 pm HK News Desk ದೇಶ - ವಿದೇಶ
ನವದೆಹಲಿ, ನ.14: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ಮಾಲಿನ್ಯದ ಬಗ್ಗೆ ಎಚ್ಚೆತ್ತ ಸುಪ್ರೀಂ ಕೋರ್ಟ್, ಗಾಳಿಯ ಗುಣಮಟ್ಟ ಸುಧಾರಣೆಗೆ ತುರ್ತು ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮತ್ತು ದೆಹಲಿ ಸರಕಾರಕ್ಕೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ಎರಡು ದಿನ ಲಾಕ್ಡೌನ್ ಅಥವಾ ಇನ್ನಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಪಂಜಾಬ್ ನಲ್ಲಿ ರೈತರು ಹೊಲಕ್ಕೆ ಬೆಂಕಿ ಹಾಕುತ್ತಿರುವುದು ಕಾರಣ ಇರಬಹುದು. ದೀಪಾವಳಿ ಪಟಾಕಿ ಉರಿಸಿದ್ದು ಅಥವಾ ಕಾರ್ಖಾನೆಗಳು ಬಿಡುವ ಹೊಗೆ ಕಾರಣ ಆಗಿರಬಹುದು. ಆದರೆ, ದೆಹಲಿಯಲ್ಲಿ ಜನರು ಸಹಜವಾಗಿ ಉಸಿರಾಡದ ಸ್ಥಿತಿ ಆಗಿದೆ. ಈ ರೀತಿಯ ಸ್ಥಿತಿಯಿಂದ ಹೊರಬರಲು ಎರಡು ದಿನ ಲಾಕ್ಡೌನ್ ಮಾಡಬಹುದು. ಅಥವಾ ಇನ್ನಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಜನರು ಹೇಗೆ ಇಲ್ಲಿ ಬದುಕಬೇಕು ಎಂದು ಸಿಜೆಐ ರಮಣ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

ದೆಹಲಿಯ ಮಾಲಿನ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಎಲ್ಲ ಸ್ಥಳೀಯಾಡಳಿತಕ್ಕೂ ಸೂಚನೆ ರವಾನಿಸಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದ್ದು, ಮಾಲಿನ್ಯ ವಿಪರೀತ ಮಟ್ಟಕ್ಕೆ ತಲುಪಿದೆ. ತುರ್ತು ಕ್ರಮ ಏನು ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದೆ. ಇದಕ್ಕುತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪಂಜಾಬ್, ಹರ್ಯಾಣದಲ್ಲಿ ರೈತರು ಹೊಲದಲ್ಲಿ ಬೆಂಕಿ ಹಾಕಿರುವುದರಿಂದ ದಟ್ಟ ಹೊಗೆ ಆವರಿಸಿದೆ ಎಂದು ಸಮಜಾಯಿಷಿ ನೀಡಲು ಮುಂದಾದರು.

ಕೇಂದ್ರ ಸರಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ಮಾತಿಗೆ ತಡೆ ಒಡ್ಡಿದ ನ್ಯಾಯಾಧೀಶರು, ನೀವು ರೈತರನ್ನೇ ಹೊಣೆಯಾಗಿಸಬೇಡಿ. ಹೊಲಕ್ಕೆ ಬೆಂಕಿ ಹಾಕುವುದನ್ನು ಯಾಕೆ ಸ್ವಲ್ಪ ವಿಳಂಬ ಮಾಡುವಂತೆ ಮಾಡಬಾರದು. ದೆಹಲಿಯಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಹೊರಗೆ ಉಸಿರಾಟಕ್ಕೇ ಸಮಸ್ಯೆಯಾಗಿದೆ. ಇಂಥದರಲ್ಲಿ ನಿಮ್ಮ ರಾಜಕೀಯ ಮಾಡುತ್ತೀರಾ.. ಕೂಡಲೇ ಈ ಬಗ್ಗೆ ತುರ್ತು ಸಭೆ ಕರೆದು ಏನಾದ್ರೂ ನಿರ್ಧಾರ ತಗೊಳ್ಳಿ. ಒಂದೆರಡು ದಿನ ಲಾಕ್ಡೌನ್ ಮಾಡಿದ್ರೂ ಆಗಬಹುದು. ಎರಡು ದಿನದಲ್ಲಿ ಮಾಲಿನ್ಯ ಅಂಶ 500ರಿಂದ 200ಕ್ಕೆ ಇಳಿಯಬೇಕು. ಅದಕ್ಕೆ ಏನಾಗಬೇಕೋ ಅದನ್ನು ತುರ್ತಾಗಿ ಮಾಡಿ ಎಂದು ವಾರ್ನ್ ಮಾಡಿದ್ದಾರೆ.
ಇದೇ ವೇಳೆ, ದೆಹಲಿ ಸರಕಾರ ರಾಜಧಾನಿಯಲ್ಲಿ ಮಾಲಿನ್ಯ ತಡೆಯಲು ಸ್ಮೋಗ್ ಟವರ್ ಅಳವಡಿಕೆ ಸೇರಿದಂತೆ ಮಾಲಿನ್ಯ ತಡೆಗೆ ಯೋಜನೆ ರೂಪಿಸುವಂತೆ ಕೋರ್ಟ್ ಸೂಚನೆ ನೀಡಿದೆ.
The Supreme Court on Saturday suggested that the Centre and the Delhi government may consider imposing a lockdown of two days in the national capital in view of the high pollution levels. The court's observations came while hearing a case in this matter.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm