ಬ್ರೇಕಿಂಗ್ ನ್ಯೂಸ್
14-11-21 01:58 pm HK News Desk ದೇಶ - ವಿದೇಶ
ಮುಂಬೈ, ನವೆಂಬರ್ 14: ಮುಂಬೈನಿಂದ 900 ಕಿಲೋ ಮೀಟರ್ ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಕನಿಷ್ಠ 26 ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.
"ನಾವು ಇದುವರೆಗೆ 26 ನಕ್ಸಲರ ಮೃತದೇಹಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ.
"ಹೆಚ್ಚುವರಿ ಎಸ್ಪಿ ಸೌಮ್ಯಾ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ತಂಡವು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ," ಎಂದು ಗೋಯಲ್ ತಿಳಿಸಿದ್ದಾರೆ.
ಪೊಲೀಸರು ನಡೆಸಿರುವ ಎನ್ಕೌಂಟರ್ನಲ್ಲಿ ಹತ್ಯೆಯಾದ 26 ಮಂದಿ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೂಲಗಳ ಪ್ರಕಾರ ಅವರಲ್ಲಿ ಉನ್ನತ ಬಂಡಾಯ ನಾಯಕನೂ ಸೇನಿದ್ದಾನೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ.
ಹೆಲಿಕಾಪ್ಟರ್ ಮೂಲಕ ಗಾಯಗೊಂಡ ಸಿಬ್ಬಂದಿ ರವಾನೆ:
ಛತ್ತೀಸ್ಗಢದ ಗಡಿಯಲ್ಲಿ ಇರುವ ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯು ನಡೆಸಿರುವ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗೆ ಗಾಯಕೊಂಡ ಪೊಲೀಸ್ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ನಾಗ್ಪುರಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
At least 26 Naxals have been eliminated in an encounter with the C-60 unit of Maharashtra Police in the jungles of Gyarapatti in Gadchiroli district on Saturday. Four jawans also suffered injuries in the encounter. The district, which lies on the border of Chhattisgarh, is over 900 km away from Mumbai. The operation in Gyarahbatti forests of Dhanora tehsil was still on and the number of casualties might increase, the senior police official said.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm