ಬ್ರೇಕಿಂಗ್ ನ್ಯೂಸ್
14-11-21 10:50 pm HK News Desk ದೇಶ - ವಿದೇಶ
ಲಕ್ನೋ, ನ.14: ಉತ್ತರ ಪ್ರದೇಶದಲ್ಲಿ ಚುನಾವಣಾ ಪೂರ್ವ ಮೈತ್ರಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತಳ್ಳಿಹಾಕಿದ್ದಾರೆ. ಚುನಾವಣೆ ಪೂರ್ವದಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ. ಕಾಂಗ್ರೆಸ್ ಗೆಲ್ಲುವುದಿದ್ದರೆ, ತನ್ನ ಸ್ವಂತ ಬಲದಲ್ಲಿ ಗೆಲ್ಲುತ್ತದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಬುಲಂದ್ ಶಹರ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಜ್ಞಾ ಸಮ್ಮೇಳನ- ಲಕ್ಷ್ಯ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶ ಚುನಾವಣೆಯಲ್ಲಿ ಕೇವಲ ಕಾಂಗ್ರೆಸ್ ಪಕ್ಷದವರನ್ನು ಮಾತ್ರ ಸ್ಪರ್ಧಾ ಕಣಕ್ಕೆ ಇಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್ ಹೇಳಿಕೆ ನೀಡಿ, ದೊಡ್ಡ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ನಷ್ಟ ಮಾಡಿಕೊಂಡಿದ್ದನ್ನು ಅನುಭವಿಸಿದ್ದೇವೆ. ಹಾಗಾಗಿ ನಾವು ಸಣ್ಣ ಪಕ್ಷಗಳನ್ನು ಜೊತೆಗೂಡಿಸಿ ಚುನಾವಣೆ ಎದುರಿಸಲು ಪ್ರಯತ್ನ ಮಾಡುತ್ತಿದ್ದೇವೆ, ದೊಡ್ಡ ಪಕ್ಷಗಳ ಮೈತ್ರಿ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ಟಾಂಗ್ ಇಟ್ಟಿದ್ದರು.
ಅಲ್ಲದೆ, ಸಮಾಜವಾದಿ ಪಾರ್ಟಿಯು ಕಾಂಗ್ರೆಸ್ ಅಥವಾ ಬಿಎಸ್ಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಇರಾದೆ ಇಟ್ಟುಕೊಂಡಿಲ್ಲ ಎಂದು ಅಖಿಲೇಶ್ ಹೇಳಿದ್ದರು. ಈಗಾಗ್ಲೇ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಚುನಾವಣಾ ತಯಾರಿ ಮಾಡಿದ್ದು, ಈ ಬಾರಿ 40 ಶೇಕಡಾ ಸೀಟುಗಳನ್ನು ಮಹಿಳೆಯರಿಗೆ ನೀಡಲಿದ್ದೇವೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ಈಮೂಲಕ ಅತಿ ದೊಡ್ಡ ರಾಜ್ಯದಲ್ಲಿ ಅರ್ಧ ಜನಸಂಖ್ಯೆಯ ಮೇಲೆ ಪ್ರಿಯಾಂಕಾ ನೇರ ಕಣ್ಣು ಹಾಕಿದ್ದಾರೆ.
ಲೋಕಸಭೆಯಲ್ಲಿ ನಿರ್ಣಾಯಕ ಆಗಿರುವ ಉತ್ತರ ಪ್ರದೇಶದಲ್ಲಿಯೇ ಕಾಂಗ್ರೆಸನ್ನು ಮತ್ತೆ ಗಟ್ಟಿಗೊಳಿಸಲು ಪ್ರಿಯಾಂಕಾ ಗಾಂಧಿ ಯೋಜನೆ ಹಾಕಿದ್ದಾರೆ. ಕಳೆದ ಬಾರಿಯ 2017ರ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ 403 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ ಏಳು ಸ್ಥಾನ ಗೆದ್ದಿತ್ತು.
Congress general secretary Priyanka Gandhi Vadra on Sunday ruled out any chances of a pre-poll alliance with other political parties for Uttar Pradesh assembly elections due next year. “If Congress has to win, it will win on its own," the 49-year-old said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm