ಬ್ರೇಕಿಂಗ್ ನ್ಯೂಸ್
30-07-20 12:13 pm Correspondent ದೇಶ - ವಿದೇಶ
ನವದೆಹಲಿ(ಜುಲೈ 30): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮೇಲೆ ಶೇ. 30ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಅರ್ಧದಷ್ಟು ತಗ್ಗಿಸಿದ್ಧಾರೆ. ದೆಹಲಿಯಲ್ಲಿ ಈಗ ವ್ಯಾಟ್ ತೆರಿಗೆಯನ್ನು ಶೇ. 16.75ಕ್ಕೆ ಇಳಿಸಲಾಗಿದೆ. ಇದರಿಂದ ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ.
ಲೀಟರ್ಗೆ 82 ರೂ ಇರುವ ಡೀಸೆಲ್ ಬೆಲೆ ಈಗ 73.64ಕ್ಕೆ ಇಳಿಕೆಯಾಗಲಿದೆ. ರಾಜಧಾನಿ ನಗರದ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೀಸೆಲ್ಗೆ ನಮ್ಮ ದೇಶದಲ್ಲಿ ಮೊದಲಿಂದಲೂ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಪೆಟ್ರೋಲ್ಗಿಂತ ಡೀಸೆಲ್ ಯಾವಾಗಲೂ ಬೆಲೆ ಕಡಿಮೆಯೇ. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು. ಇದರಿಂದ ಪೆಟ್ರೋಲ್ಗಿಂತ ಇಲ್ಲಿ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳು 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಇದರಿಂದ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಯನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ಗೆ ಕೇಂದ್ರ ಸರ್ಕಾರ ಈಗ ಸರಿಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸುಂಕ 32.98 ರೂ ಇದೆ. ಡೀಸೆಲ್ ಮೇಲೆ 31.83 ಇದೆ. ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ನಂಥ ತೆರಿಗೆಯನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ, ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm