ಬ್ರೇಕಿಂಗ್ ನ್ಯೂಸ್
30-07-20 12:13 pm Correspondent ದೇಶ - ವಿದೇಶ
ನವದೆಹಲಿ(ಜುಲೈ 30): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮೇಲೆ ಶೇ. 30ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಅರ್ಧದಷ್ಟು ತಗ್ಗಿಸಿದ್ಧಾರೆ. ದೆಹಲಿಯಲ್ಲಿ ಈಗ ವ್ಯಾಟ್ ತೆರಿಗೆಯನ್ನು ಶೇ. 16.75ಕ್ಕೆ ಇಳಿಸಲಾಗಿದೆ. ಇದರಿಂದ ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ.
ಲೀಟರ್ಗೆ 82 ರೂ ಇರುವ ಡೀಸೆಲ್ ಬೆಲೆ ಈಗ 73.64ಕ್ಕೆ ಇಳಿಕೆಯಾಗಲಿದೆ. ರಾಜಧಾನಿ ನಗರದ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೀಸೆಲ್ಗೆ ನಮ್ಮ ದೇಶದಲ್ಲಿ ಮೊದಲಿಂದಲೂ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಪೆಟ್ರೋಲ್ಗಿಂತ ಡೀಸೆಲ್ ಯಾವಾಗಲೂ ಬೆಲೆ ಕಡಿಮೆಯೇ. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು. ಇದರಿಂದ ಪೆಟ್ರೋಲ್ಗಿಂತ ಇಲ್ಲಿ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳು 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಇದರಿಂದ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಯನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ಗೆ ಕೇಂದ್ರ ಸರ್ಕಾರ ಈಗ ಸರಿಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸುಂಕ 32.98 ರೂ ಇದೆ. ಡೀಸೆಲ್ ಮೇಲೆ 31.83 ಇದೆ. ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ನಂಥ ತೆರಿಗೆಯನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ, ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm