ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm