ಬ್ರೇಕಿಂಗ್ ನ್ಯೂಸ್
13-09-20 01:27 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್.13: ದೆಹಲಿ ಗಲಭೆಗೆ ಸಂಬಂಧಿಸಿ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಮಾಜಿ ಆಪ್ ಮುಖಂಡ ಯೋಗೇಂದ್ರ ಯಾದವ್, ಆರ್ಥಿಕ ತಜ್ಞೆ ಜಯತಿ ಘೋಷ್, ದೆಹಲಿ ಯುನಿವರ್ಸಿಟಿ ಪ್ರೊಫೆಸರ್ ಅಪೂರ್ವಾನಂದ ಅವರ ಹೆಸರನ್ನು ಪೊಲೀಸರು ಆರೋಪಪಟ್ಟಿಯಲ್ಲಿ ಸೇರಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದ ಗಲಭೆಯಲ್ಲಿ ಬಂಧಿತರಾದ ಜೆಎನ್ ಯು ಮತ್ತು ಜಾಮಿಯಾ ವಿವಿಯ ವಿದ್ಯಾರ್ಥಿಗಳು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚುವರಿ ಆರೋಪಪಟ್ಟಿ ದಾಖಲಿಸಿದ್ದು, ಅದರಲ್ಲಿ ಯೆಚೂರಿ ಸೇರಿದಂತೆ ಹಲವರ ಹೆಸರು ಸೇರ್ಪಡೆಯಾಗಿದೆ. ಗಲಭೆಗೆ ಪ್ರಚೋದನೆ ಮತ್ತು ಸಂಚು ರೂಪಿಸಿದ ಆರೋಪವನ್ನು ಇವರ ಮೇಲೆ ಹೊರಿಸಲಾಗಿದೆ.

ಫೆಬ್ರವರಿ 23ರಿಂದ 26ರ ವರೆಗೆ ನಡೆದಿದ್ದ ಗಲಭೆಯನ್ನು ಹತ್ತಿಕ್ಕಲು ಪೊಲೀಸರು ಗೋಲಿಬಾರ್ ನಡೆಸಿದ್ದರು. ಗಲಭೆಯಲ್ಲಿ 53 ಮಂದಿ ಸಾವಿಗೀಡಾಗಿದ್ದರೆ, 581 ಮಂದಿ ಗಾಯಗೊಂಡಿದ್ದರು. ಜಯತಿ ಘೋಷ್, ಅಪೂರ್ವಾನಂದ ಮತ್ತು ರಾಹುಲ್ ರಾಯ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಜಾಮಿಯಾ ಕೋರ್ಡಿನೇಶನ್ ಕಮಿಟಿಗಳ ಪ್ರತಿಭಟನೆಗೆ ಬೆಂಬಲವಾಗಿ ನಿಂತಿದ್ದರು. ಸಿಎಎ ಪ್ರತಿಭಟನೆ ಇನ್ನಷ್ಟು ಮುಂದುವರಿಯುವಂತೆ ಹಿಂಭಾಗದಿಂದ ಸಂಚು ರೂಪಿಸುತ್ತಿದ್ದರು. ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ ಎಂದು ಪ್ರಚೋದನೆ ನೀಡುತ್ತಿದ್ದುದಾಗಿ ಬಂಧಿತ ಜೆಎನ್ ಯು ವಿದ್ಯಾರ್ಥಿನಿಯರಾದ ದೇವಾಂಗನ ಕಲಿತಾ ಮತ್ತು ನಟಾಶಾ ನರ್ವಾಲ್ ಪೊಲೀಸರಿಗೆ ಹೇಳಿಕೆ ನೀಡಿದ್ದರು.

ಸೀತಾರಾಂ ಯೆಚೂರಿ, ಯೋಗೇಂದ್ರ ಯಾದವ್, ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್, ಉಮರ್ ಖಾಲಿದ್, ಲಾಯರ್ ಮಹಮೂದ್ ಪ್ರಾಚಾ ಹೀಗೆ ಪ್ರಮುಖ ನಾಯಕರು ಸೇರಿ ನಮ್ಮನ್ನು ಪ್ರಚೋದಿಸಿದ್ದರು. ವಿದ್ಯಾರ್ಥಿಗಳೆಲ್ಲ ಸೇರಿ ಭಾರತ ಸರಕಾರದ ಪ್ರತಿಷ್ಠೆ, ಗೌರವಕ್ಕೆ ಧಕ್ಕೆ ಬರುವಂತೆ ಜನರನ್ನು ಸೇರಿಸಿ ಘೋಷಣೆ ಕೂಗುವಂತೆ ಪ್ರೇರಣೆ ನೀಡಿದ್ದರು ಎಂದು ಜಾಮಿಯಾ ವಿವಿಯ ವಿದ್ಯಾರ್ಥಿನಿ ಫಾತಿಮಾ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾಳೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm