ಬ್ರೇಕಿಂಗ್ ನ್ಯೂಸ್
13-09-20 01:27 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್.13: ದೆಹಲಿ ಗಲಭೆಗೆ ಸಂಬಂಧಿಸಿ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಮಾಜಿ ಆಪ್ ಮುಖಂಡ ಯೋಗೇಂದ್ರ ಯಾದವ್, ಆರ್ಥಿಕ ತಜ್ಞೆ ಜಯತಿ ಘೋಷ್, ದೆಹಲಿ ಯುನಿವರ್ಸಿಟಿ ಪ್ರೊಫೆಸರ್ ಅಪೂರ್ವಾನಂದ ಅವರ ಹೆಸರನ್ನು ಪೊಲೀಸರು ಆರೋಪಪಟ್ಟಿಯಲ್ಲಿ ಸೇರಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದ ಗಲಭೆಯಲ್ಲಿ ಬಂಧಿತರಾದ ಜೆಎನ್ ಯು ಮತ್ತು ಜಾಮಿಯಾ ವಿವಿಯ ವಿದ್ಯಾರ್ಥಿಗಳು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚುವರಿ ಆರೋಪಪಟ್ಟಿ ದಾಖಲಿಸಿದ್ದು, ಅದರಲ್ಲಿ ಯೆಚೂರಿ ಸೇರಿದಂತೆ ಹಲವರ ಹೆಸರು ಸೇರ್ಪಡೆಯಾಗಿದೆ. ಗಲಭೆಗೆ ಪ್ರಚೋದನೆ ಮತ್ತು ಸಂಚು ರೂಪಿಸಿದ ಆರೋಪವನ್ನು ಇವರ ಮೇಲೆ ಹೊರಿಸಲಾಗಿದೆ.

ಫೆಬ್ರವರಿ 23ರಿಂದ 26ರ ವರೆಗೆ ನಡೆದಿದ್ದ ಗಲಭೆಯನ್ನು ಹತ್ತಿಕ್ಕಲು ಪೊಲೀಸರು ಗೋಲಿಬಾರ್ ನಡೆಸಿದ್ದರು. ಗಲಭೆಯಲ್ಲಿ 53 ಮಂದಿ ಸಾವಿಗೀಡಾಗಿದ್ದರೆ, 581 ಮಂದಿ ಗಾಯಗೊಂಡಿದ್ದರು. ಜಯತಿ ಘೋಷ್, ಅಪೂರ್ವಾನಂದ ಮತ್ತು ರಾಹುಲ್ ರಾಯ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಜಾಮಿಯಾ ಕೋರ್ಡಿನೇಶನ್ ಕಮಿಟಿಗಳ ಪ್ರತಿಭಟನೆಗೆ ಬೆಂಬಲವಾಗಿ ನಿಂತಿದ್ದರು. ಸಿಎಎ ಪ್ರತಿಭಟನೆ ಇನ್ನಷ್ಟು ಮುಂದುವರಿಯುವಂತೆ ಹಿಂಭಾಗದಿಂದ ಸಂಚು ರೂಪಿಸುತ್ತಿದ್ದರು. ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ ಎಂದು ಪ್ರಚೋದನೆ ನೀಡುತ್ತಿದ್ದುದಾಗಿ ಬಂಧಿತ ಜೆಎನ್ ಯು ವಿದ್ಯಾರ್ಥಿನಿಯರಾದ ದೇವಾಂಗನ ಕಲಿತಾ ಮತ್ತು ನಟಾಶಾ ನರ್ವಾಲ್ ಪೊಲೀಸರಿಗೆ ಹೇಳಿಕೆ ನೀಡಿದ್ದರು.

ಸೀತಾರಾಂ ಯೆಚೂರಿ, ಯೋಗೇಂದ್ರ ಯಾದವ್, ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್, ಉಮರ್ ಖಾಲಿದ್, ಲಾಯರ್ ಮಹಮೂದ್ ಪ್ರಾಚಾ ಹೀಗೆ ಪ್ರಮುಖ ನಾಯಕರು ಸೇರಿ ನಮ್ಮನ್ನು ಪ್ರಚೋದಿಸಿದ್ದರು. ವಿದ್ಯಾರ್ಥಿಗಳೆಲ್ಲ ಸೇರಿ ಭಾರತ ಸರಕಾರದ ಪ್ರತಿಷ್ಠೆ, ಗೌರವಕ್ಕೆ ಧಕ್ಕೆ ಬರುವಂತೆ ಜನರನ್ನು ಸೇರಿಸಿ ಘೋಷಣೆ ಕೂಗುವಂತೆ ಪ್ರೇರಣೆ ನೀಡಿದ್ದರು ಎಂದು ಜಾಮಿಯಾ ವಿವಿಯ ವಿದ್ಯಾರ್ಥಿನಿ ಫಾತಿಮಾ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾಳೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm