ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm