ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 01:42 pm
Mangalore Correspondent
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm